ಪಾಕ್ ವಿರುದ್ಧ ಭಾರತಕ್ಕೆ ಮತ್ತೊಂದು ಜಯ: 3 ವಾರ ಬಂಧನದಲ್ಲಿದ್ದ BSF ಯೋಧ ಭಾರತಕ್ಕೆ ವಾಪಸ್

ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನದ ಸೇನೆಯಿಂದ ಬಂಧನಕ್ಕೊಳಗಾಗಿದ್ದ ಯೋಧ ವಾಘಾ ಗಡಿ ಮೂಲಕ ಸ್ವದೇಶಕ್ಕೆ ಮರಳಿದ್ದಾರೆ. ಆಕಸ್ಮಿಕವಾಗಿ ಫಿರೋಜ್ಪುರ ವಲಯದಲ್ಲಿ ಗಡಿ ದಾಟಿದ್ದ ಬಿಎಸ್ಎಫ್ ಯೋಧನನ್ನು ಬಂಧಿಸಿದ್ದ ಪಾಕ್ ರೇಂಜರ್ಗಳು 20 ದಿನಗಳ ಬಳಿಕ ಇಂದು ಅಟ್ಟಾರಿ ಗಡಿ ಮೂಲಕ ಬಿಡುಗಡೆಗೊಳಿಸಿದೆ. ಬಿಎಸ್ಎಫ್ ಮಾಹಿತಿ ಪ್ರಕಾರ, ಇಂದು ಬೆಳಗ್ಗೆ 10:30ರ ಸುಮಾರಿಗೆ ಅಟ್ಟಾರಿ – ವಾಘಾ ಗಡಿಯಲ್ಲಿ ಬಿಎಸ್ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬಿಡುಗಡೆಗೊಳಿಸಿದೆ.
ಬಿಎಸ್ಎಫ್ ತನ್ನ ಸೈನಿಕರಿಗೆ ಗಡಿಯಲ್ಲಿ ಗಸ್ತು ತಿರುಗುವಾಗ ಜಾಗರೂಕರಾಗಿರಲು ಕಟ್ಟುನಿಟ್ಟಿನ ಸಲಹೆಯನ್ನು ನೀಡುತ್ತದೆ. ಏ.23ರಂದು ಪಂಜಾಬ್ನ ಫಿರೋಜ್ಪುರ ಬಳಿ ಕರ್ತವ್ಯದಲ್ಲಿದ್ದ 182ನೇ ಬೆಟಾಲಿಯನ್ ಕಾನ್ಸ್ಟೇಬಲ್ ಪೂರ್ಣಮ್ ಕುಮಾರ್ ಶಾ ಅವರು ವಿಶ್ರಾಂತಿ ಪಡೆಯಲು ಮರದ ಕೆಳಗೆ ಕುಳಿತುಕೊಳ್ಳಲು ಹೊರಟಾಗ ಆಕ್ಮಸಿಕವಾಗಿ ಗಡಿದಾಟಿದ್ದರು. ಈ ವೇಳೆ ಅವರನ್ನು ಪಾಕಿಸ್ತಾನ ರೇಂಜರ್ಗಳು ಬಂಧಿಸಿದ್ದರು.
ಅದಾದ ಬಳಿಕ ಬಿಎಸ್ಎಫ್ ಯೋಧನ ಬಿಡುಗಡೆಗಾಗಿ ಪಾಕ್ ರೇಂಜರ್ಗಳೊಂದಿಗೆ ನಿರಂತರ ಸಭೆ ನಡೆಸಲಾಗಿತ್ತು. ಮಾತುಕತೆಯ ಹೊರತಾಗಿಯೂ ರೇಂಜರ್ನನ್ನ ಭಾರತಕ್ಕೆ ಹಸ್ತಾಂತರಿಸಲು ನಿರಾಕರಿಸಿದ್ದರು.
ಪೂರ್ಣಮ್ ಕುಮಾರ್ ಶಾ ಅವರನ್ನು ಲಾಹೋರ್-ಅಮೃತಸರ ವಲಯದ ರೇಂಜರ್ಸ್ ನೆಲೆಗೆ ಸ್ಥಳಾಂತರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ, ಕಾನ್ಸ್ಟೆಬಲ್ ಅವರ ಪತ್ನಿ ರಜನಿ ಶಾ ಅವರು ಬಿಎಸ್ಎಫ್ನ ಪಶ್ಚಿಮ ಕಮಾಂಡ್ನ ಹಿರಿಯ ಅಧಿಕಾರಿಗಳೊಂದಿಗೆ ಈ ವಿಷಯದ ಕುರಿತು ಮಾತನಾಡಲು ಪಶ್ಚಿಮ ಬಂಗಾಳದಿಂದ ಪಂಜಾಬ್ಗೆ ಪ್ರಯಾಣ ಬೆಳೆಸಿದ್ದರು
ಸೇನಾ ಸಮವಸ್ತ್ರ ಧರಿಸಿದ್ದರು ಹಾಗೂ ಸೇವಾ ಬಂದೂಕು ಹೊಂದಿದ್ದರು. ರೈತರೊಂದಿಗೆ ಇದ್ದ ಇವರು, ವಿಶ್ರಾಂತಿಗಾಗಿ ನೆರಳು ಅರಸಿ ಹೊರಟಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಸಿಂಗ್ ಅವರನ್ನು ಪಾಕಿಸ್ತಾನಿ ಸೇನೆ ವಶಕ್ಕೆ ಪಡೆದಿದೆ ಎಂದು ಮೂಲಗಳು ಹೇಳಿವೆ.
ನಿಮ್ಮ ಪ್ರತಿಕ್ರಿಯೆ ಏನು?






