ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್! ಅತ್ಯಾಚಾರ ಕೇಸ್'ನಲ್ಲಿ "ದೋಷಿ" ಎಂದು ಕೊರ್ಟ್ ತೀರ್ಪು

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಜುಲೈ 29ರಂದು ವಿಚಾರಣೆ ಪೂರ್ಣಗೊಳಿಸಿದ ಬಳಿಕ ಇಂದು ತೀರ್ಪು ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಘೋಷಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಆರ್ ನಗರ ಮೂಲದ ಸಂತ್ರಸ್ತೆ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಮತ್ತು ಅಪಹರಣ ಪ್ರಕರಣ ದಾಖಲಾಗಿತ್ತು. ತೀವ್ರವಾದ ವಾದ-ಪ್ರತಿವಾದಗಳ ನಂತರ ಇಂದು ತೀರ್ಪು ಹೊರಬಿದ್ದಿದೆ.
2024ರ ಲೋಕಸಭಾ ಚುನಾವಣೆ ಸಂದರ್ಭ ಪ್ರಜ್ವಲ್ ರೇವಣ್ಣ ಅವರದು ಎಂದು ಹೇಳಲಾಗಿದ್ದ ಅಶ್ಲೀಲ ದೃಶ್ಯಗಳಿರುವ ಪೆನ್ ಡ್ರೈವ್ ವೈರಲ್ ಆಗಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ನಂತರ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ, ಕೆಆರ್ ನಗರದ ಮನೆ ಕೆಲಸದ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಇದೀಗ ನ್ಯಾಯಾಲಯದ ತೀರ್ಪು ಹೊರಬಿದ್ದು, ಪ್ರಜ್ವಲ್ ರೇವಣ್ಣ ಅವರಿಗೆ ಗಂಭೀರ ಕಾನೂನು ಸಂಕಷ್ಟ ಎದುರಾಗಿರುವುದಾಗಿದೆ. ಮುಂದಿನ ಹಂತದಲ್ಲಿ ಶಿಕ್ಷೆಯ ಅವಧಿಯ ಕುರಿತು ನ್ಯಾಯಾಲಯ ಆದೇಶ ಹೊರಡಿಸಬೇಕಿದೆ.
ನಿಮ್ಮ ಪ್ರತಿಕ್ರಿಯೆ ಏನು?






