ಫಿನಾಲೆ ಹಂತಕ್ಕೆ ಬಂದು ತಲುಪಿದ ಸರಿಗಮಪ ಶೋ: ವಿನ್ನರ್ ಪಟ್ಟ ಸಿಗೋದು ಯಾರಿಗೆ?

ಸರಿಗಮಪ ರಿಯಾಲಿಟಿ ಶೋ ಫಿನಾಲೆ ಹತ್ತಿರ ಆಗುತ್ತಿದ್ದಂತೆಯೇ ವೀಕ್ಷಕರಲ್ಲಿ ಕುತೂಹಲ ಹೆಚ್ಚಾಗುತ್ತಿದೆ. ಕನ್ನಡದ ಕಿರುತೆರೆ ಇತಿಹಾಸದಲ್ಲಿ ಅತೀ ಹೆಚ್ಚು ಜನಮನ್ನಣೆ ಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಸರಿಗಮಪ ರಿಯಾಲಿಟಿ ಶೋ. 6 ವರುಷದಿಂದ 60 ವರ್ಷದ ವರೆಗಿನ ವಯೋಮಿತಿಯ ಸ್ಪರ್ಧಿಗಳು ಭಾಗವಹಿಸುತ್ತಿರುವ ಈ ಸೀಸನ್ ವಿಭಿನ್ನ ಪರಿಕಲ್ಪನೆಯಿಂದ ಮತ್ತಷ್ಟು ಇಂಟೆರೆಸ್ಟಿಂಗ್ ಆಗಿ ಮೂಡಿಬರುತ್ತಿದೆ. ಅಷ್ಟೇ ಅಲ್ಲದೇ ತೀರ್ಪುಗಾರರಾದ ಮೆಲೋಡಿ ಕಿಂಗ್ ರಾಜೇಶ್ ಕೃಷ್ಣನ್, ಕಂಚಿನ ಕಂಠದ ಗಾಯಕ ವಿಜಯ ಪ್ರಕಾಶ್, ಮ್ಯಾಜಿಕಲ್ ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಮತ್ತು ಜನಪ್ರಿಯ ಆಂಕರ್ ಅನುಶ್ರೀ ಈ ಆವೃತ್ತಿಯ ಅತೀ ದೊಡ್ಡ ಹೈಲೈಟ್.
ಅದರ ಜೊತೆಗೆ ಸ್ಪರ್ಧಿಗಳ ನಡುವಿನ ಕಠಿಣ ಪೈಪೋಟಿ ನಡೆಯುತ್ತಿದೆ. ಈ ವಾರ ನಡೆಯಲಿರುವ ‘ಟಿಕೆಟ್ ಟು ಫಿನಾಲೆ’ಯಲ್ಲಿ 13 ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ಬಾಳು ಬೆಳಗುಂದಿ, ದ್ಯಾಮೇಶ, ಭೂಮಿಕಾ, ಲಹರಿ, ಕಾರ್ತಿಕ್, ಮನೋಜ್, ರಶ್ಮಿ ಡಿ, ಅಮೋಘ ವರ್ಷ, ಸುಧೀಕ್ಷಾ, ಆಗಮ ಶಾಸ್ತ್ರೀ, ದೀಪಕ್, ಶಿವಾನಿ ಮತ್ತು ಆರಾಧ್ಯ ರಾವ್ ನಡುವೆ ಹಣಾಹಣಿ ಶುರುವಾಗಿದೆ.
ಈಗಾಗಲೇ 13 ಸ್ಪರ್ಧಿಗಳಲ್ಲಿ ಒಬ್ಬರಿಗೆ ಲಕ್ಕಿ ಎಂಬಂತೆ ಫಿನಾಲೆಗೆ ಟಿಕೆಟ್ ಸಿಕ್ಕಾಗಿದೆ. ಅಷ್ಟೇ ಅಲ್ಲದೇ, ಈ ವಾರ ನಡೆಯಲಿರುವ ಟಿಕೆಟ್ ಟು ಫಿನಾಲೆ ಸಂಚಿಕೆಗೆ ಕನ್ನಡ ಚಿತ್ರರಂಗದ ಖ್ಯಾತ ನಟ ಶರಣ್ ಮತ್ತು ನಟಿ ಅದಿತಿ ಪ್ರಭುದೇವ ಅವರು ಆಗಮಿಸಿದ್ದಾರೆ. ಅದರಲ್ಲಿ ಖ್ಯಾತ ನಟ ಶರಣ್ ಅವರಿಂದ ಆ ಲಕ್ಕಿ ಸ್ಪರ್ಧಿಗೆ ಫಿನಾಲೆ ಟಿಕೆಟ್ ನೀಡಿದ್ದಾರೆ. ‘ಟಿಕೆಟ್ ಟು ಫಿನಾಲೆ’ ಪಾಸ್ ಪಡೆದ ಲಕ್ಕಿ ಸ್ಪರ್ಧಿ ಬೇರೆ ಯಾರು ಅಲ್ಲ. ಅವರೇ ಬೀದರ್ನ ಶಿವಾನಿ.
ಬೀದರ್ ಪ್ರತಿಭೆ ಶಿವಾನಿ ಶಿವದಾಸ್ ಅವರು ಹಾಡಿದ ಶಿವ ಶಿವಾ ಗಾಯನಕ್ಕೆ ಇಡೀ ಜನತೆ ತಲೆದೂಗಿದ್ದರು. ಈ ಹಿಂದೆ ಶಿವಾನಿ ಶಿವದಾಸ್ ಹಿಂದಿ ಐಡಿಯಲ್ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಯೂ ಕೂಡ ಫೇಮಸ್ ಆಗಿದ್ದರು. ಇದೀಗ ಸರ್ಪ್ರೈಸ್ ಎಂಬಂತೆ ‘ಟಿಕೆಟ್ ಟು ಫಿನಾಲೆ’ ಪಾಸ್ ತೆಗೆದುಕೊಂಡು ಫಿನಾಲೆಗೆ ಎಂಟ್ರಿ ಕೊಟ್ಟಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






