ಬಸ್ ನಲ್ಲಿ ನಮಾಜ್ ಪ್ರಕರಣ: ಕಾರ್ಮಿಕರ ದಿನದಂದೇ KSRTC ಚಾಲಕ ಸಸ್ಪೆಂಡ್!

ಮೇ 1, 2025 - 21:01
 0  15
ಬಸ್ ನಲ್ಲಿ ನಮಾಜ್ ಪ್ರಕರಣ: ಕಾರ್ಮಿಕರ ದಿನದಂದೇ KSRTC ಚಾಲಕ ಸಸ್ಪೆಂಡ್!

ಹಾವೇರಿ:- ಕರ್ತವ್ಯದ ವೇಳೆ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದ KSRTC  ಚಾಲಕನ ವಿಡಿಯೋ ಭಾರೀ ವೈರಲ್ ಆಗಿತ್ತು. ಹಾಗೂ ವ್ಯಾಪಕ ಆಕ್ರೋಶಕ್ಕೂ ಕಾರಣವಾಗಿತ್ತು. ಇದರ ಬೆನ್ನಲ್ಲೇ ತನಿಖೆಗೆ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದರು. ಈ ಹಿನ್ನೆಲೆ ಸಸ್ಪೆಂಡ್ ಮಾಡಲಾಗಿದೆ. 

ಎ.ಆರ್.ಮುಲ್ಲಾ ಸಸ್ಪೆಂಡ್ ಆದ ಚಾಲಕ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿಸ್ತುಪಾಲನೆ ಅಧಿಕಾರಿ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ವಿಚಾರಣೆ ಮುಗಿಯುವವರೆಗೂ ಅಮಾನತು ಮಾಡಿ ಆದೇಶಿಸಿದ್ದು, ಘಟನೆ ಬಗ್ಗೆ ಸಂಪೂರ್ಣ ವಿವರಣೆ ನೀಡುವಂತೆ ಸೂಚನೆ ನೀಡಿದ್ದಾರೆ.

ಏಪ್ರಿಲ್​ 29ರಂದು ಹುಬ್ಬಳ್ಳಿಯಿಂದ ಹಾವೇರಿ ನಡುವಿನ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ನ ಚಾಲಕ ಕಂ ನಿರ್ವಾಹಕ ಮುಲ್ಲಾ ಮಾರ್ಗಮಧ್ಯೆ ಬಸ್‌ ನಿಲ್ಲಿಸಿ ನಮಾಜ್‌ ಮಾಡಿದ್ದರು. ನಮಾಜ್ ಮಾಡುತ್ತಿರುವ ವಿಡಿಯೋವನ್ನು  ಪ್ರಯಾಣಿಕನೋರ್ವ ಸೆರೆಹಿಡಿದಿದ್ದ, ಬಳಿಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಡ್ರೈವರ್​ ಮುಲ್ಲಾ ನಡೆಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿದ್ದವು

ಇಂದು ಕಾರ್ಮಿಕರ ದಿನಾಚರಣೆಯಂದೇ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿಸ್ತುಪಾಲನೆ ಅಧಿಕಾರಿ ಡ್ರೈವರ್​ ಮುಲ್ಲಾನನ್ನು ಕರ್ತವ್ಯದಿಂದ ಸಸ್ಪಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಘಟನೆ ಬಗ್ಗೆ ಸಂಪೂರ್ಣ ವಿವರಣೆ ನೀಡುವಂತೆ ತಿಳಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow