ಬಹುಭಾಷಾ ಸ್ಟಾರ್ ನಟಿ ದಿಢೀರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ಯಾಕೆ? ಅಂತದ್ದೇನಾಯ್ತು?

ಭಾರತೀಯ ನಟಿ, ಸಮಾಜ ಸೇವಕಿ, ರಾಜಕಾರಣಿ ಮತ್ತು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂನ ಉಪ ಪ್ರಚಾರ ಕಾರ್ಯದರ್ಶಿಯಾಗಿರುವ ಗೌತಮಿ ತಡಿಮಲ್ಲ ಅವರು ಮುಖ್ಯವಾಗಿ ಮಲಯಾಳಂ , ಹಿಂದಿ ಮತ್ತು ಕನ್ನಡ ಚಲನಚಿತ್ರಗಳ ಜೊತೆಗೆ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ . ಅವರು 1987 ರಿಂದ 1998 ರವರೆಗೆ ದಕ್ಷಿಣ ಭಾರತದ ಪ್ರಮುಖ ನಟಿಯರಲ್ಲಿ ಒಬ್ಬರಾಗಿದ್ದರು.
ಇಂತಹ ಬಹುಭಾಷಾ ನಟಿ ನಟಿ ಗೌತಮಿ ದಿಢೀರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಹಿರಿಯ ನಟಿ ಗೌತಮಿ ತಡಿಮಲ್ಲ ಅವರಿಗೆ ಜೀವ ಬೆದರಿಕೆ ಬಂದಿದ್ದರಿಂದ ಪೊಲೀಸರಿಗೆ ರಕ್ಷಣೆ ಕೋರಿ ದೂರು ದಾಖಲಿಸಿದ್ದಾರೆ. ಚೆನ್ನೈ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಖುದ್ದು ಭೇಟಿ ನೀಡಿ ದೂರು ಸಲ್ಲಿಸಿರುವ ಅವರು, ಉದ್ಯಮಿಯೊಬ್ಬರು ತಮ್ಮ ಆಸ್ತಿಯನ್ನು ಕಬಳಿಸಲು ಯತ್ನಿಸುತ್ತಿದ್ದು, ಅವರಿಂದ ತಮಗೆ ಮತ್ತು ತಮ್ಮ ಮಗಳಿಗೆ ಅಪಾಯವಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ನಟಿ ಗೌತಮಿ ಅವರು ಸಿ. ಅಳಗಪ್ಪನ್ ಎಂಬ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಿದ್ದಾರೆ. ಅಳಗಪ್ಪನ್ ಮತ್ತು ಅವರ ಕುಟುಂಬದವರು ಕಳೆದ ಹಲವು ವರ್ಷಗಳಿಂದ ತಮಗೆ ಪರಿಚಿತರಾಗಿದ್ದು, ಅವರ ಮೂಲಕವೇ ನಾನುಕೆಲವು ಆಸ್ತಿಗಳನ್ನು ಖರೀದಿಸಿದ್ದರು ಎಂದು ದೂರಿನಲ್ಲಿ ಬರೆದುಕೊಂಡಿದ್ದಾರೆ. ಆದರೆ, ಇತ್ತೀಚೆಗೆ ಅಳಗಪ್ಪನ್ ಅವರು ತಮ್ಮನ್ನು ವಂಚಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿಗಳನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಗೌತಮಿ ಆರೋಪಿಸಿದ್ದಾರೆ.
ಇನ್ನೂ, ನಟಿ ಗೌತಮಿ ಅವರ ದೂರನ್ನು ದಾಖಲಿಸಿಕೊಂಡ ಚೆನ್ನೈ ಪೊಲೀಸರು ಸದ್ಯ ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಅಲ್ಲದೇ ನಟಿ ಆರೋಪ ಮಾಡಿರೋ ಅಳಗಪ್ಪನ್ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.
ನಿಮ್ಮ ಪ್ರತಿಕ್ರಿಯೆ ಏನು?






