ಬಿಗ್ ಬಾಸ್ ಮನೆಯಲ್ಲಿ ಹೊಸ ಬೆಳವಣಿಗೆ: ದೊಡ್ಮನೆಗೆ ಎಮರ್ಜೆನ್ಸಿ ಸೈರನ್, ಆತಂಕಗೊಂಡ ಸ್ಪರ್ಧಿಗಳು!

ಬಿಗ್ ಬಾಸ್ ಸೀಸನ್ 11 ವೀಕ್ಷಕರಿಗೆ ಸಖತ್ ಮನರಂಜನೆ ಕೊಡುತ್ತಿರುವುದಲ್ಲಿ ಯಾವುದೇ ಡೌಟ್ ಇಲ್ಲ. ಸ್ವರ್ಗ, ನರಕ ಎಂಬ ಎರಡು ಕಾನ್ಸೆಪ್ಟ್ ನಲ್ಲಿ ಈ ಸೀಸನ್ ಮೂಡಿ ಬಂದಿದ್ದು, ವೀಕ್ಷಕರಿಗೆ ಮಾತ್ರ ಮನರಂಜನೆ ಸಿಗುತ್ತಿದೆ.
ಆದರೆ ಇದೀಗ ದೊಡ್ಮನೆಯಲ್ಲಿ ಹೊಸ ಬದಲಾವಣೆ ಆಗಿದೆ. ಬಿಗ್ಬಾಸ್ ಮನೆಯಲ್ಲಿ ಸೈರನ್ ಆಗಿದೆ. ಇದರಿಂದ ಸ್ಪರ್ಧಿಗಳು ಗಾಬರಿಯಾಗಿ ಓಡಿ ಬಂದು ಒಟ್ಟಿಗೆ ನಿಂತಿದ್ದಾರೆ. ‘ಏನೋ ಎಂಟ್ರಿ ಆಗ್ತಿದೆ.., ಕ್ರೇನ್ನಿಂದ ಏನೋ ತೆಗಿತಾ ಇದ್ದಾರೆ, ಏಯ್ ಯಾರು? ಏನಿದು’ ಅಂತಾ ಆತಂಕದಿಂದ ಮಾತನಾಡಿಕೊಂಡಿದ್ದಾರೆ. ಅಷ್ಟರಲ್ಲೇ ಬಿಗ್ಬಾಸ್ ಮನೆಗೆ ಎಂಟ್ರಿಯಾಗಿರುವ ಮುಸುಕುಧಾರಿಗಳು ಮನೆಯಲ್ಲಿದ್ದ ಕೆಲವು ವಸ್ತುಗಳನ್ನು ಹಾನಿ ಮಾಡಿದ್ದಾರೆ. ನಂತರ ಸ್ವರ್ಗ-ನರಕ ಎಂದು ವಿಭಾಗ ಮಾಡಿದ್ದ ಗೇಟ್ಗಳನ್ನು ಬೇಧಿಸಿದ್ದಾರೆ. ನಂತರ ಬಿಗ್ಬಾಸ್ನ ಧ್ವನಿ ಮೊಳಗಿದೆ. 11ನೇ ವೇದಿಕೆಯಲ್ಲಿ ನೀವೆಲ್ಲರೂ ಎರಡು ವಾರ ಜೀವಿಸಿದ್ದೀರಿ. ಇಲ್ಲಿನ ಪ್ರತಿ ಕ್ಷಣವನ್ನೂ ಅನುಭವಿಸಿದ್ದೀರಿ ಎಂಬ ಧ್ವನಿ ಬಂದು ಹೋಗಿದೆ.
ಈ ಪ್ರೋಮೋ ನೊಡಿದ ಅಭಿಮಾನಿಗಳು ಸ್ವರ್ಗ-ನರಕ ಇಂದಿಗೆ ಕೊನೆಗೊಂಡಿದೆ ಎಂದು ಮಾತನಾಡಿಕೊಳ್ತಿದ್ದಾರೆ. ಸ್ವರ್ಗ-ನರಕ ಕಾನ್ಸೆಪ್ಟ್ಗೆ ಏನಾಯ್ತು? ಎರಡೇ ವಾರಕ್ಕೆ ನಿಂತು ಹೋಯ್ತಾ ಎಂದು ಕೆಲವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಾರೆ ಇಂದು ನಡೆಯುವ ಎಪಿಸೋಡ್ ತುಂಬಾ ಕುತೂಹಲಕಾರಿಯಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






