ಬಿಗ್ ಮನೆಗೆ ಬಂದ ಅದಿತಿ, ಶರಣ್: ಫಿನಾಲೆ ಟಿಕೆಟ್ ಕೊಟ್ಟಿರುವುದು ಯಾರಿಗೆ ಗೊತ್ತಾ!?

ವಿಭಿನ್ನ ವ್ಯಕ್ತಿತ್ವಗಳ ಜೊತೆ ಬದುಕುವುದು ಅಷ್ಟು ಸುಲಭವಲ್ಲ. ಇದು ಬಿಗ್ಬಾಸ್ ಮನೆಯಲ್ಲಿ ಮತ್ತೆ, ಮತ್ತೆ ಪ್ರೂವ್ ಆಗ್ತಾನೆ ಇರುತ್ತೆ. ಫಿನಾಲೆ ಟಿಕೆಟ್ ಪಡೆಯೋದಕ್ಕೆ ಹೋರಾಟ ನಡೀತಿದೆ. ಹಲವು ವಾಗ್ವಾದಗಳಿಗೆ ಬಿಗ್ಬಾಸ್ ಮನೆ ಸಾಕ್ಷಿಯಾಗಿದೆ.
ಬಿಗ್ ಬಾಸ್ ಕನ್ನಡ ಸೀಸನ್ 11 ರೋಚಕ ಘಟ್ಟವನ್ನು ತಲುಪಿದೆ. ಈ ವಾರ ಟಿಕೆಟ್ ಟು ಫಿನಾಲೆಗಾಗಿ ಜಿದ್ದಾಜಿದ್ದಿಯ ಹೋರಾಟ ಬಿಗ್ ಬಾಸ್ ಮನೆಯಲ್ಲಿ ಜೋರಾಗಿದ್ದು, ಇರುವ ಒಂಬತ್ತು ಜನರ ಪೈಕಿ ಒಬ್ಬರು ಈ ವಾರವೇ ಫಿನಾಲೆಗೆ ಹೋಗುವುದು ಖಚಿತವಾಗಿದೆ. ಹೀಗಾಗಿ ಬಿಗ್ ಬಾಸ್ ಮನೆಯೊಳಗೆ ಟಾಸ್ಕ್ ಕಾವು ಹೆಚ್ಚಾಗಿದ್ದು, ಆಟದ ಜೊತೆಗೆ ಹೊಡೆದಾಟ ಬಡಿದಾಟಗಳು ಕೂಡ ಜೋರಾಗಿ ನಡೆಯುತ್ತಿದೆ.
ಬಿಗ್ ಬಾಸ್ ಸೀಸನ್ 11 ಇನ್ನೇನು ಕೆಲವು ದಿನಗಳು ಮಾತ್ರ ಈ ಶೋ ನಡೆಯಲಿದ್ದು ಅಷ್ಟರಲ್ಲೇ ಅದೃಷ್ಟಶಾಲಿ ಯಾರೆಂದು ಆಯ್ಕೆ ಮಾಡಬೇಕಿದೆ. ಈ ಸಂಬಂಧ ಈ ವಾರದ ಫಿನಾಲೆಗೆ ಹೋಗುವ ಒಬ್ಬ ಆಟಗಾರರ ಹೆಸರು ಹೇಳಲು ನಟ ಶರಣ್ ಹಾಗೂ ಅದಿತಿ ಪ್ರಭುದೇವ ಅವರು ಬಿಗ್ಬಾಸ್ ಮನೆಗೆ ಆಗಮಿಸಿದ್ದಾರೆ.
ಬಿಗ್ಬಾಸ್ ಕೊಟ್ಟಿರುವ ಟಾಸ್ಕ್ ಅನ್ನು ರಜತ್ ಕಿಶನ್, ಹನುಮಂತು, ಭವ್ಯ ಹಾಗೂ ತ್ರಿವಿಕ್ರಮ್ ಈ ನಾಲ್ವರು ಸರದಿಯಲ್ಲಿ ಆಡಬೇಕಾಗಿದೆ. ಟ್ರಂಕ್ನಲ್ಲಿರುವ ಬಾವುಟ ಇರುವ ಸ್ಟಿಕ್ ತೆಗೆದುಕೊಂಡು ಹಗ್ಗಗಳಿಂದ ಮಾಡಿದ ಬಲೆಯನ್ನು ಹಿಡಿದು ಮೇಲಕ್ಕೆ ಏರಬೇಕಿದೆ. ಬಳಿಕ ಅಲ್ಲಿ ಹೋಗಿ ಬಾವುಟದ ಸ್ಟಿಕ್ ಇಟ್ಟು ಬಿಗ್ಬಾಸ್ ಎಂದು ಕೂಗಿ ಹೇಳಬೇಕು. ಈ ಟಾಸ್ಕ್ ಅನ್ನು ಸ್ಪರ್ಧಿಗಳು ಅತಿ ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಬೇಕು.
ಸದ್ಯ ಈ ಟಾಸ್ಕ್ಗೆ ಅಣಿಯಾಗಿರುವ ತ್ರಿವಿಕ್ರಮ್, ರಜತ್ ಕಿಶನ್, ಭವ್ಯ ಹಾಗೂ ಹನುಮಂತು ಇವರಲ್ಲಿ ಯಾರು ಅತ್ಯಂತ ಕಡಿಮೆ ಅವಧಿಯಲ್ಲಿ ಆಟ ಮುಗಿಸುತ್ತಾರೋ ಅವರು ಫಿನಾಲೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಡಲಿದ್ದಾರೆ. ಮನೆಗೆ ಅತಿಥಿಯಾಗಿ ಆಗಮಿಸಿರುವ ಅದಿತಿ ಹಾಗೂ ಚರಣ್ ಅವರು ಸ್ಪರ್ಧಿಯನ್ನು ಗುರುತಿಸಿದ್ದಾರೆ. ನೇರವಾಗಿ ಫಿನಾಲೆಗೆ ಹೋಗುವಂತ ಒಬ್ಬ ಸ್ಪರ್ಧಿ ಎಂದು ಶರಣ್ ಹೇಳಿದ್ದಾರೆ. ಆದರೆ ಸ್ಪರ್ಧಿ ಯಾರು ಎಂದು ಹೆಸರನ್ನು ಬಹಿರಂಗ ಪಡಿಸಿಲ್ಲ.
ಇನ್ನು ಗೇಮ್ನಲ್ಲಿ ಭವ್ಯ, ಹನುಮಂತು, ತ್ರಿವಿಕ್ರಮ್, ಕ್ಯಾಪ್ಟನ್ ರಜತ್ ಎಲ್ಲರೂ ಮೇಲೆ ಏರಿ ಟಾಸ್ಕ್ ಪೂರ್ಣಗೊಳಿಸಿ, ಬಾವುಟವನ್ನಿಟ್ಟು ಬಿಗ್ಬಾಸ್ ಎಂದು ಕೂಗಿದ್ದಾರೆ. ಆದರೆ ಯಾರು ಕಡಿಮೆ ಅವಧಿಯಲ್ಲಿ ಟಾಸ್ಕ್ ಪೂರ್ಣಗೊಳಸಿದ್ದಾರೆ, ಯಾರು ಗೆಲುವು ಪಡೆದಿದ್ದಾರೆ ಎನ್ನುವುದು ಮಾತ್ರ ಸಸ್ಪೆನ್ಸ್ ಆಗಿ ಇಟ್ಟಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






