ಬಿಸಿಲ ಬೇಗೆ: ಕ್ಯಾಪ್ ತೊಟ್ಟು ಎತ್ತಿನ ಗಾಡಿ ಸವಾರಿ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್!

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆದ ಬಳಿಕ ಅವರ ಪತ್ನಿ ವಿಜಯಲಕ್ಷ್ಮೀ ಅವರು ಸಾಕಷ್ಟು ಸಂಕಟಪಟ್ಟರು. ಪತಿಯನ್ನು ಹೊರಕ್ಕೆ ಕರೆದುಕೊಂಡು ಬರಲು ಸಾಕಷ್ಟು ಹರಸಾಹಸಪಟ್ಟರು. ಕೊನೆಗೂ ಅವರ ಪ್ರಯತ್ನ ಫಲ ಕೊಟ್ಟಿತು. ದರ್ಶನ್ ಜಾಮೀನು ಪಡೆದು ಹೊರಕ್ಕೆ ಬಂದಿದ್ದಾರೆ.
ಇನ್ನೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು, ತಮ್ಮ ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಡಿ ಏರಿರುವ ವಿಡಿಯೋ ವೈರಲ್ ಆಗುತ್ತಿದೆ. ಬಿಸಿಲಿ ತಾಪ ತಪ್ಪಿಸಿಕೊಳ್ಳಲು ಕ್ಯಾಪ್ ತೊಟ್ಟು ಸ್ವತಃ ತಾವೇ ಬಂಡಿ ಓಡಿಸಿ ದಾಸ ಖುಷಿ ಪಟ್ಟಿದ್ದಾರೆ. ಡೆವಿಲ್ ಶೂಟಿಂಗ್ ಬ್ಯುಸಿ ನಡುವೆ ದರ್ಶನ್ ತಮ್ಮ ಫಾರ್ಮ್ ಹೌಸ್ ನಲ್ಲಿ ಕಾಲ ಕಳೆಯುತ್ತಿದ್ದಾರೆ.
ದರ್ಶನ್ ಸದ್ಯ ಡೆವಿಲ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಬೆಂಗಳೂರಿನಲ್ಲಿ ನಾಲ್ಕನೇ ಹಂತದ ಶೂಟಿಂಗ್ ನಡೆಯುತ್ತಿದೆ. ಮಿಲನಾ ಪ್ರಕಾಶ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬರುತ್ತಿದ್ದು, ಈ ವರ್ಷವೇ ಡೆವಿಲ್ ಅಬ್ಬರ ಶುರುವಾಗಲಿದೆ ಎನ್ನಲಾಗುತ್ತಿದೆ.
ಇನ್ನೂ ದಾಸನ ಬಳಿ ಐಶಾರಾಮಿ ಕಾರುಗಳ ಸಂಗ್ರಹವೇ ಇದೆ. ಆದರೆ ಅವರು ಆಗಾಗ್ಗೆ ಟ್ರಾಕ್ಟರ್ , ಎತ್ತಿನ ಬಂಡಿ ಏರುವುದುಂಟು. ಈಗ ತಮ್ಮ ಫಾರ್ಮ್ ಹೌಸ್ ನಲ್ಲಿ ಬಂಡಿ ಏರಿ ಸವಾರಿ ಮಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






