ಬೆಂಗಳೂರಿನಲ್ಲಿ ಭೀಕರ ಅಪಘಾತ: ಬೈಕ್’ಗೆ ಡಿಕ್ಕಿ ಹೊಡೆದ ಟ್ರಕ್, ಬಾಲಕ ಸಾವು!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿ ಬಾಲಕ ಸಾವನ್ನಪ್ಪಿರುವ ಘಟನೆ ಹೆಣ್ಣೂರು ಬಳಿ ನಡೆದಿದೆ. ಭಾನು ತೇಜ(12) ಮೃತ ದುರ್ಧೈವಿಯಾಗಿದ್ದು,
ದ್ವಿಚಕ್ರ ವಾಹನದಲ್ಲಿ ಅಣ್ಣನ ಜೊತೆ ಹೋಗುತ್ತಿದ್ದಾಗ ಹಿಂಬದಿಯಿಂದ ಏಕಾಏಕಿ ಟ್ರಕ್ ಡಿಕ್ಕಿ ಹೊಡೆದಿದೆ. ತಲೆಯ ಮೇಲೆ ಟ್ರಕ್ನ ಎರಡು ಚಕ್ರ ಹರಿದ ಪರಿಣಾಮ ಬಾಲಕನ ಶಿರಭಾಗ ಛಿದ್ರಛಿದ್ರವಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಹೆಣ್ಣೂರು ಬಂಡೆಯ ಕ್ಲಾಸಿಕ್ ರಾಯಲ್ ಗಾರ್ಡನ್ ಮುಂಭಾಗದಲ್ಲಿ ಅಪಘಾತ ಸಂಭವಿಸಿದೆ . ಟ್ರಕ್ ಅತೀ ವೇಗವೇ ಕಾರಣ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಹೇಳಿದ್ದಾರೆ.
ಅಂಬೇಡ್ಕರ್ ಆಸ್ಪತ್ರೆಗೆ ಮೃತ ಬಾಲಕನ ದೇಹ ರವಾನೆ ಮಾಡಲಾಗಿದೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಬಾಲಕನ ಅಣ್ಣನಿಗೆ ಗಾಯವಾಗಿದ್ದು ಅಂಬೇಡ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






