ಬೆಂಗಳೂರಿನಿಂದ ತುಮಕೂರಿಗೆ ವಿಸ್ತರಣೆ ಆಗುತ್ತಾ ಮೆಟ್ರೋ!? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು!?

ತುಮಕೂರು:- ಬೆಂಗಳೂರಿನಿಂದ ತುಮಕೂರಿಗೆ ನಮ್ಮ ಮೆಟ್ರೋ ವಿಸ್ತರಣೆ ಕುರಿತು ಗೃಹ ಸಚಿವ ಪರಮೇಶ್ವರ್ ಬಿಗ್ ಅಪ್ ಡೇಟ್ ಕೊಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಈ ಬಗ್ಗೆ ವಿಸ್ತೃತ ಯೋಜನಾ ನಡೆಯುತ್ತಿದೆ. ಹೈದರಾಬಾದ್ ಮೂಲದ ಕಂಪನಿ ಡಿಪಿಆರ್ ತಯಾರಿ ಮಾಡುತ್ತಿದೆ.
ಡಿಪಿಆರ್ ಆದ ಬಳಿಕ ಎಸ್ಪಿಪಿ ಮಾಡಿ ಸರ್ಕಾರದ ಮುಂದೆ ವರದಿ ಇಡಲಾಗುತ್ತದೆ ಎಂದು ತಿಳಿಸಿದರು ವಸಂತನರಸಾಪುರದಲ್ಲಿ ಟೌನ್ಶಿಪ್ ನಿರ್ಮಾಣ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ಜಾಗ ಗುರುತಿಸಲಾಗಿದೆ. ಪಿಪಿಪಿ ಮಾಡೆಲ್ನಲ್ಲಿ ಟೌನ್ಶಿಫ್ ನೀಡಲಾಗುತ್ತದೆ. ಇನ್ನು, ನಮ್ಮ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಬಗ್ಗೆ ಚರ್ಚೆ ಇಲ್ಲ. ದಾಬಸ್ ಪೆಟೆ ನೆಲಮಂಗಲ ಬಳಿ ನಿರ್ಮಾಣ ಮಾಡಲು ಚರ್ಚೆ ನಡೆಯುತ್ತಿದೆ ಎಂದರು.
ಇನ್ನೂ 52.41 ಕಿ.ಮೀ. ಉದ್ದದ ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಮಾರ್ಗದಲ್ಲಿ 19 ಎತ್ತರದ ನಿಲ್ದಾಣಗಳ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಮಾದಾವರ ನಿಲ್ದಾಣದಿಂದ ಪ್ರಾರಂಭವಾಗುವ ಮೆಟ್ರೋ ಮಾರ್ಗವು ತುಮಕೂರು ಬಸ್ ನಿಲ್ದಾಣದವರೆಗೆ ವಿಸ್ತರಿಸುವ ಗುರಿ ಹೊಂದಿದೆ. ಬಹು ನಿರೀಕ್ಷಿತ ಈ ಯೋಜನೆಯು ತುಮಕೂರು ಬೆಂಗಳೂರು ನಡುವಿನ ಸಾರಿಗೆ ಸೌಲಭ್ಯವನ್ನು ಮತ್ತಷ್ಟು ಸುಲಭವಾಗಿಸಲಿದೆ
ನಿಮ್ಮ ಪ್ರತಿಕ್ರಿಯೆ ಏನು?






