ಭ್ರಷ್ಟ ಅಧಿಕಾರಿ ಮನೆಯಲ್ಲಿ ರಾಶಿ, ರಾಶಿ ಚಿನ್ನಾಭರಣಗಳು: ಬೆಚ್ಚಿಬಿದ್ದ ಲೋಕಾಯುಕ್ತ ಅಧಿಕಾರಿಗಳು!

ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕ ತಿಪ್ಪೇಸ್ವಾಮಿ ಮನೆಯಲ್ಲೂ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.
ಎಸ್ ಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ ದಾಳಿ ನಡೆಸಿರೋ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಅಧಿಕಾರಿಗಳ ಮನೆ, ಕಚೇರಿ ಇನ್ನಿತರೆ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಪ್ಪೇಸ್ವಾಮಿ ಅವರ ಮನೆಯಲ್ಲಿ 28ಕ್ಕೂ ಹೆಚ್ಚು ಜೊತೆ ಓಲೆ, ಎಂಟಕ್ಕೂ ಐಷಾರಾಮಿ ವಾಚ್ ಗಳು,
23ಕ್ಕೂ ಹೆಚ್ಚು ಚಿನ್ನದ ಸರ, ಮುತ್ತಿನ ಪಂಡೆಂಟ್ ಇರುವ ಸರ, ಉಂಗುರಗಳು ಮತ್ತು ಕೆಜಿಗಟ್ಟಲೆ ಬೆಳ್ಳಿ ವಸ್ತುಗಳು ಪತ್ತೆಯಾದ ಹಿನ್ನಲೆಯಲ್ಲಿ ಇವುಗಳ ಪರಿಶೀಲನೆಗಾಗಿ ಗಿರಿನಗರದ ಮನೆಗೆ ಅಕ್ಕಸಾಲಿಗರನ್ನು ಕೂಡ ಕರೆಸಲಾಗಿದೆ. ಚನ್ನಗಿರಿ ತಾಲೂಕಿನ ನಲ್ಕುದುರೆ ಗ್ರಾಮದಲ್ಲಿರುವ ತಿಪ್ಪೇಸ್ವಾಮಿ ಅವರ ಪತ್ನಿ ಮನೆ ಮೇಲೆ ಲೊಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






