ಮಸೀದಿ ಬಳಿ ಜೈ ಶ್ರೀರಾಂ ಅಂದ್ರೆ ಅಪರಾಧವೇ? ನಿಮ್ಮ ಅಭಿಪ್ರಾಯ ಹೇಳಿ? ಕರ್ನಾಟಕ ಪೊಲೀಸರಿಗೆ ಸುಪ್ರೀಂ ಮನವಿ!

ಡಿಸೆಂಬರ್ 16, 2024 - 21:05
 0  11
ಮಸೀದಿ ಬಳಿ ಜೈ ಶ್ರೀರಾಂ ಅಂದ್ರೆ ಅಪರಾಧವೇ? ನಿಮ್ಮ ಅಭಿಪ್ರಾಯ ಹೇಳಿ? ಕರ್ನಾಟಕ ಪೊಲೀಸರಿಗೆ ಸುಪ್ರೀಂ ಮನವಿ!

ಮಸೀದಿ ಬಳಿ ಜೈ ಶ್ರೀರಾಂ ಅಂದ್ರೆ ಅಪರಾಧವೇ? ನಿಮ್ಮ ಅಭಿಪ್ರಾಯ ಹೇಳಿ? ಎಂದು ಕರ್ನಾಟಕ ಪೊಲೀಸರಿಗೆ ಸುಪ್ರೀಂ ಕೋರ್ಟ್ ಮನವಿ ಮಾಡಿದೆ.  ಮಸೀದಿ ಆವರಣದಲ್ಲಿ ಜೈ ಶ್ರೀರಾಂ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ. ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ಸೋಮವಾರ ವಿಚಾರಣೆ ಕೈಗೆತ್ತಿಕೊಂಡಿದ್ದು, ಕರ್ನಾಟಕ ಪೊಲೀಸರ ಅಭಿಪ್ರಾಯ ಕೋರಿದೆ. 

ಪ್ರಕರಣದ ಮುಂದಿನ ವಿಚಾರಣೆಯನ್ನು 2025ರ ಜನವರಿ ತಿಂಗಳಿನಲ್ಲಿ ನಡೆಸುವುದಾಗಿ ತಿಳಿಸಿದೆ. ತಾಲೂಕಿನ ಐತ್ತೂರು ಗ್ರಾಮದ ಕಡಬ-ಮರ್ದಾಳ ರಸ್ತೆಯಲ್ಲಿರುವ ಮಸೀದಿ ಆವರಣಕ್ಕೆ ನುಗ್ಗಿದ್ದ ಕೆಲವು ಅಪರಿಚಿತ ವ್ಯಕ್ತಿಗಳು ‘ಜೈ ಶ್ರೀ ರಾಮ್’ ಎಂದು ಘೋಷಣೆಗಳನ್ನು ಕೂಗಿದ್ದರು. ಬ್ಯಾರಿ ಸಮುದಾಯಕ್ಕೆ ಸೇರಿದವರನ್ನು ಬದುಕಲ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು ಎಂದು ಕಡಬ ಠಾಣೆಯ ಪೊಲೀಸರಿಗೆ ನೀಡಿದ ದೂರಿನಲ್ಲಿ ಮಸೀದಿ ಆಡಳಿತ ಉಲ್ಲೇಖಿಸಿತ್ತು. 2023ರ ಸೆಪ್ಟೆಂಬರ್​​ನಲ್ಲಿ ಈ ಘಟನೆ ನಡೆದಿತ್ತು. ಕೆಲವು ಯುವಕರು ಬೈಕ್‌ಗಳಲ್ಲಿ ಮಸೀದಿ ಸುತ್ತಿದ್ದಲ್ಲದೆ, ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿರುವ ಸಿಸಿಟಿವಿ ದೃಶ್ಯವನ್ನೂ ಅವರು ಒದಗಿಸಿದ್ದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow