ಮಹಾರಾಷ್ಟ್ರದಲ್ಲಿ ರೈಲು ದುರಂತ: ಟ್ರೇನ್ʼನಿಂದ ಜಿಗಿದವರ ಮೇಲೆ ಹರಿದ ಕರ್ನಾಟಕ ಎಕ್ಸ್ಪ್ರೆಸ್ ರೈಲು! 20 ಮಂದಿ ಸಾವು

ಜನವರಿ 22, 2025 - 18:16
 0  37
ಮಹಾರಾಷ್ಟ್ರದಲ್ಲಿ ರೈಲು ದುರಂತ: ಟ್ರೇನ್ʼನಿಂದ ಜಿಗಿದವರ ಮೇಲೆ ಹರಿದ ಕರ್ನಾಟಕ ಎಕ್ಸ್ಪ್ರೆಸ್ ರೈಲು! 20 ಮಂದಿ ಸಾವು

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಪುಷ್ಪಕ್ ಎಕ್ಸ್ಪ್ರೆಸ್ರೈಲಿನ ಪ್ರಯಾಣಿಕರ ಮೇಲೆ, ಕರ್ನಾಟಕ ಎಕ್ಸ್ಪ್ರೆಸ್ ರೈಲಕು ಹರಿದಿದ್ದುಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೊದಲು ಪುಷ್ಪಕ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬಿಸಿ ಗಾಳಿ ಕಾಣಿಸಿದೆ. ಈ ಬಿಸಿಗಾಳಿಯನ್ನೇ ಪ್ರಯಾಣಿಕರು ಬೆಂಕಿ ಎಂದು ಭಾವಿಸಿ ಕೆಳಕ್ಕೆ ಜಿಗಿದಿದ್ದಾರೆ. ಕೆಳಕ್ಕೆ ಜಿಗಿಯುವ ಸಮಯದಲ್ಲಿ ಮತ್ತೊಂದು ಹಳಿಯಲ್ಲಿ ಕರ್ನಾಟಕ ಎಕ್ಸ್‌ಪ್ರೆಸ್‌ ಬಂದಿದ್ದು ಹಳಿಯಲ್ಲಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಇದರಿಂದಾಗಿ ಸಾವು ನೋವು ಜಾಸ್ತಿಯಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಕರ್ನಾಟಕ ಎಕ್ಸ್‌ಪ್ರೆಸ್‌ ಬರುತ್ತಿದ್ದರೆ,  ಪುಷ್ಪಕ್‌ ಎಕ್ಸ್‌ಪ್ರೆಸ್‌ ಲಕ್ನೋದಿಂದ ಮುಂಬೈಗೆ ಬರುತ್ತಿತ್ತು. ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹಲವರು ಗಾಯಗೊಂಡಿದ್ದಾರೆ.

ರೈಲ್ವೆ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಪಚೋರಾ ರೈಲು ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ಪುಷ್ಪಕ್ ಎಕ್ಸ್ ಪ್ರೆಸ್ ನಿಲುಗಡೆಯಾಗುತ್ತಿದ್ದಂತೆ, ರೈಲಿನಲ್ಲಿ ಬೆಂಕಿ ಹತ್ತಿಕೊಂಡಿದೆ ಎಂದು ವದಂತಿ ಹರಡಿತ್ತು. ಇದರಿಂದ ಭಯಗೊಂಡ ಕೆಲವರು ಆಗಲೇ ಜಿಗಿಯತೊಡಗಿದರು. ಆಗಲೇ ಬೆಂಗಳೂರು ಎಕ್ಸ್ ಪ್ರೆಸ್ ಮುಂದೆಯಿಂದ ಬರುತ್ತಿತ್ತು, ಜನ ಜಿಗಿಯುತ್ತಿದ್ದಂತೆ ಕೆಲವರು ಈ ಬೆಂಗಳೂರು ಎಕ್ಸ್ ಪ್ರೆಸ್ ಅಡಿಗೆ ಬಿದ್ದಿದ್ದಾರೆ. ಇನ್ನು ಸಂಜೆ 4:20ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ 8 ಆಂಬ್ಯುಲೆನ್ಸ್‌ಗಳನ್ನು ರವಾನಿಸಲಾಗಿದೆ. ಅಲ್ಲದೆ, ಗಾಯಾಳುಗಳನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow