ಮಹಿಳೆಗಾಗಿ ಆಪ್ತ ಸ್ನೇಹಿತನಿಗೆ ಹಿಂಸೆ ಕೊಟ್ರಾ ಎಸ್.ಎಸ್. ರಾಜಮೌಳಿ..!? ಆತ್ಮಹ*ತ್ಯೆ ಮಾಡಿಕೊಂಡ ನಿರ್ಮಾಪಕ

ಫೆಬ್ರವರಿ 27, 2025 - 18:09
 0  11
ಮಹಿಳೆಗಾಗಿ ಆಪ್ತ ಸ್ನೇಹಿತನಿಗೆ ಹಿಂಸೆ ಕೊಟ್ರಾ ಎಸ್.ಎಸ್. ರಾಜಮೌಳಿ..!? ಆತ್ಮಹ*ತ್ಯೆ ಮಾಡಿಕೊಂಡ ನಿರ್ಮಾಪಕ

ಇತ್ತೀಚೆಗೆ ಟಾಲಿವುಡ್ ನಿರ್ದೇಶಕ ಎಸ್.ಎಸ್. ರಾಜಮೌಳಿ ವಿರುದ್ಧ ಅನೇಕ ಆರೋಪಗಳು ಬೆಳಕಿಗೆ ಬಂದಿವೆ. ಖ್ಯಾತ ನಿರ್ಮಾಪಕ ಶ್ರೀನಿವಾಸ್ ರಾವ್ ನನ್ನ ಸಾವಿಗೆ ಎಸ್.ಎಸ್ ರಾಜಮೌಳಿ ಕಾರಣ ಎಂದು ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎನ್.ಟಿ.ಆರ್ ನಟನೆಯ ಯಮದೊಂಗ ಸಿನಿಮಾವನ್ನು ಶ್ರೀನಿವಾಸ್ ರಾವ್ ನಿರ್ಮಾಣ ಮಾಡಿದ್ದರು.

ಎಸ್.ಎಸ್ ರಾಜಮೌಳಿಯ ಆತ್ಮಿಯ ಸ್ನೇಹಿತನೂ ಆಗಿದ್ದ ಶ್ರೀನಿವಾಸ್ ರಾವ್‍ ಡೆತ್ ನೋಟ್ ಮತ್ತು ಸಾಯುವ ಮುನ್ನ ವಿಡಿಯೋವೊಂದನ್ನು ಮಾಡಿ, ತನ್ನ ಸಾವಿಗೆ ರಾಜಮೌಳಿ ಮತ್ತು ಅವರ ಪತ್ನಿ ರಮಾ ಕಾರಣ ಅಂತ ಹೇಳಿಕೊಂಡಿದ್ದಾನೆ. ಜೊತೆಗೆ ರಾಜಮೌಳಿ ಮತ್ತು ತನ್ನ ನಡುವಿನ ಲವ್ ಸ್ಟೋರಿಯನ್ನು ಶ್ರೀನಿವಾಸ್ ಹಂಚಿಕೊಂಡಿದ್ದಾನೆ.

ರಾಜಮೌಳಿ ಮತ್ತು ನಾನು ಒಂದೇ ಹುಡುಗಿಯನ್ನು ಪ್ರೀತಿಸ್ತಾ ಇದ್ದೆವು. ಆ ಹುಡುಗಿಯನ್ನು ರಾಜಮೌಳಿ ತ್ಯಾಗ ಮಾಡುವಂತೆ ನನಗೆ ಹೇಳಿದ. ಹಾಗಾಗಿ ನಾನು ಆ ಹುಡುಗಿಯನ್ನು ರಾಜಮೌಳಿಗೆ ಬಿಟ್ಟು ಕೊಟ್ಟೆ. ಅಲ್ಲಿಂದ ನಾನು ಮದುವೆ ಆಗಿಲ್ಲ. ರಾಜಮೌಳಿಗೂ ನನಗೂ 34 ವರ್ಷದ ಸ್ನೇಹ.  ಇತ್ತೀಚೆಗೆ ಸಣ್ಣ ಮನಸ್ತಾಪ ಆಯಿತು.

ನಾನು ನಮ್ಮ ಲವ್ ಸ್ಟೋರಿಯನ್ನು ಸಿನಿಮಾ ಮಾಡೋದಾಗಿ ಹೇಳಿದೆ. ಅಲ್ಲಿಂದ ರಾಜಮೌಳಿ ನಿರಂತರವಾಗಿ ನನಗೆ ಟಾರ್ಚರ್ ಮಾಡೋಕೆ ಶುರು ಮಾಡಿದ ಅಂತ ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ರಾಜಮೌಳಿ ವಿರುದ್ಧ ಕ್ರಮ ತಗೆದುಕೊಳ್ಳುವಂತೆ ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಈವರೆಗೂ ಶ್ರೀನಿವಾಸ್ ರಾವ್ ಅವರ ಮೃತದೇಹ ಸಿಕ್ಕಿಲ್ಲ ಅನ್ನೋ ಮಾಹಿತಿಯೂ ಇದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow