ಮಾಜಿ ಸಿಎಂ ಮತ್ತೆ ಸಂಕಷ್ಟ: ಭ್ರಷ್ಟಾಚಾರ ಕೇಸಲ್ಲಿ BSY ವಿರುದ್ಧ ಪ್ರಾಸಿಕ್ಯೂಷನ್ʼಗೆ ಸಂಪುಟ ಅಸ್ತು

ಬೆಂಗಳೂರು: ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿರುದ್ಧ ಕಾನೂನುಬಾಹಿರ ಡಿನೋಟಿಫಿಕೇಷನ್ಗಳ ಆರೋಪಗಳು ಬಂದಿದ್ದವು. ಈ ಆರೋಪಗಳ ಬಗ್ಗೆ ಕೋರ್ಟ್ಗೆ ಖಾಸಗಿ ದೂರು ಸಲ್ಲಿಸಲು ಮುಂದಾಗಿದ್ದ ವಕೀಲ ಸಿರಾಜಿನ್ ಬಾಷಾ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ 2011 ರಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ಅಂದಿನ ರಾಜ್ಯಪಾಲ ಹಂಸರಾಜ ಭಾರದ್ವಾಜ್ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರು. ಇದಾದ ಮೇಲೆ ಇಕ್ಕಟ್ಟಿಗೆ ಸಿಲುಕಿದ ಬಿಎಸ್ವೈ ತಮ್ಮ ಹುದ್ದೆಗೆ ರಾಜಿನಾಮೆ ನೀಡಬೇಕಾಯಿತು.
ಇದೀಗ ಎಂಎಸ್ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಅಕ್ರಮ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ಮತ್ತೆ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿದೆ. ಈ ಹಿಂದೆ ತಿರಸ್ಕಾರವಾಗಿದ್ದ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್, ಇದೀಗ ಮತ್ತೆ ಪುನರ್ ಪರಿಶೀಲನೆ ಮಾಡುವಂತೆ ರಾಜ್ಯಪಾಲರಿಗೆ ಕ್ಯಾಬಿನೆಟ್ ಮನವಿ ಮಾಡಿದೆ. ಈ ಬಗ್ಗೆ ಸ್ವತಃ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.
ರಾಮಲಿಂಗಂ ಕಂಪನಿ ಅಕ್ರಮದ ಬಗ್ಗೆ ಟಿ.ಜೆ.ಅಬ್ರಾಹಂ ಅವರು 2020ರ ನ.19ರಂದು ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಎಸಿಬಿಗೆ ದೂರು ನೀಡಿದ್ದರು. PMLA ಕಾಯ್ದೆ ಅಡಿ ದೂರು ನೀಡಿ ತನಿಖೆ ನಡೆಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಆದ್ರೆ, ಅಂದು ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲು ನಿರಾಕರಿಸಿದ್ದರು. ಇದೀಗ ಅದನ್ನು ಮತ್ತೆ ಪುನರ್ ಪರಿಶೀಲನೆಗೆ ರಾಜ್ಯಪಾಲರಿಗೆ ಕ್ಯಾಬಿನೆಟ್ ಮನವಿ ಮಾಡಿದೆ ಎಂದು ಸ್ಪಷ್ಟಪಡಿಸಿದರು. ಆದ್ರೆ, ರಾಜ್ಯಪಲಾರು ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುತ್ತಾರಾ? ಅಥವಾ ಮತ್ತೆ ತಿರಸ್ಕಾರ ಮಾಡುತ್ತಾರಾ ಎನ್ನುವುದರ ಮೇಲೆ ಯಡಿಯೂರಪ್ಪನವರ ಭವಿಷ್ಯ ಅಡಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






