ಮುಡಾ ಕೇಸ್: ಇಡಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ – ಹಣ ವರ್ಗಾವಣೆ ಯತ್ನದಲ್ಲಿ ಸಿದ್ದರಾಮಯ್ಯ ಭಾಗಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಮುಡಾ ಹಗರಣದ ತನಿಖೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು 14 ಸೈಟ್ ಪಡೆದಿದ್ದಾರೆಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಇದೇ ಹೊತ್ತಲ್ಲೇ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದು, ಈ ಮಧ್ಯೆ ಮುಡಾ ಅಕ್ರಮ ವರ್ಗಾವಣೆಯ ಯತ್ನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎನ್ನುವ ಸ್ಫೋಟಕ ಮಾಹಿತಿ ಇಡಿ ತತ್ಕಾಲಿಕ ಜಪ್ತಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇಡಿ ತನಿಖೆಯಲ್ಲಿ ಬಹಿರಂಗವಾದ ಮಾಹಿತಿ..
1, ಕೆಸರೆ ಗ್ರಾಮದ 3ಎಕರೆ 26 ಗುಂಟೆ ಜಮೀನನ್ನ ಮುಡಾ 3.24 ಲಕ್ಷ ರೂ ವಶಪಡಿಸಿಕೊಂಡಿತ್ತು
2, ತಪ್ಪು ಮಾಹಿತಿ ಹಾಗೂ ಪ್ರಭಾವದಿಂದಾಗಿ ಡಿನೋಟಿಫಿಕೇಷನ್ ಕೈಬಿಡಲಾಗಿತ್ತು
3, ಮುಡಾ ಸೈಟ್ ಮಾಡಿ ಮಾರಾಟ ಮಾಡಿದ್ದ ಜಾಗವನ್ನ ಮಲ್ಲಿಕಾರ್ಜುನ ಸ್ವಾಮಿಯಿಂದ ಖರೀದಿ
ಮಲ್ಲಿಕಾರ್ಜುನ ಸ್ವಾಮಿ ಖರೀದಿ ಮಾಡಿದಾಗ ಮುಡಾ ಯಾವುದೇ ಆಕ್ಷೇಪ ಮಾಡಿಲ್ಲ
4, ಮುಡಾ ದಿಂದ ತಪ್ಪು ವರದಿ ಆಧರಿಸಿ ಮಲ್ಲಿಕಾರ್ಜುನ ಸ್ವಾಮಿ ಭಾಗವನ್ನು ರೆಸಿಡೆನ್ಸಿಯಲ್ ಜಾಗವಾಗಿ ಮಾರ್ಪಾಡು
5, ರಾಜಕೀಯ ಪ್ರಭಾವದಿಂದಾಗಿ ಐಷಾರಾಮಿ ಬಡಾವಣೆಯಲ್ಲಿ ಬದಲಿ ಸೈಟ್ ಪಡೆದ ಬಿ.ಎಂ.ಪಾರ್ವತಿ
6, ಮುಡಾದಿಂದ ಕಾನೂನು ಬಾಹಿರವಾಗಿ ಪರಿಹಾರ ಸೈಟ್ ಪಡೆಯಲಾಗಿದೆ
7, ಮುಡಾ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಸೈಟ್ ಪಡೆಯಲಾಗಿದೆ
ಡಿ.ಬಿ.ನಟೇಶ್ ಮುಡಾ ಆಯುಕ್ತರಾಗಿದ್ದಾಗ ವೇಳೆಯಲ್ಲಿ ದೊಡ್ಡ ಮಟ್ಟದ ಹಗರಣ ನಡೆದಿದೆ
8, ಇಡಿ ತನಿಖೆಯಲ್ಲಿ ಪಿಎಂಎಲ್ಎ ಕಾಯಿದೆ ಸೆ. 3ಅಡಿ ಮನಿಲ್ಯಾಂಡ್ರಿಂಗ್ ನಡೆದಿರುವುದು ಸ್ಷಷ್ಡವಾಗಿದೆ
ಇಡಿ ತನಿಖೆಯಲ್ಲಿ ಸಿದ್ದರಾಮಯ್ಯ, ಬಿ.ಎಂ.ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜೆ.ದೇವರಾಜು ಆರೋಪಿಗಳಾಗಿದ್ದಾರೆ ಎಂದು ಉಲ್ಲೇಖ
ನಿಮ್ಮ ಪ್ರತಿಕ್ರಿಯೆ ಏನು?






