ಮುಡಾ, ಪೋಕ್ಸೋ ಕೇಸ್: ಹಾಲಿ, ಮಾಜಿ ಸಿಎಂಗಳಿಗೆ ಸಿಕ್ತು BIGG ರಿಲೀಫ್!

ಧಾರವಾಡ:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ.
ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಪ್ರಕರಣವನ್ನು ಸಿಬಿಐಗೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಇನ್ನು ತೀರ್ಪು ಪ್ರಕಟವಾಗುತ್ತಿದ್ದಂತೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ, ಕಾನೂನು ಹೋರಾಟ ಮುಂದುವರಿಸುತ್ತೇವೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದಿದ್ದಾರೆ.
ಮತ್ತೊಂದೆಡೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಬಿಎಸ್ವೈ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.
ಇದನ್ನು ರದ್ದು ಕೋರಿ ಬಿಎಸ್ವೈ ಹೈಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಕೋರ್ಟ್ ರಿಲೀಫ್ ನೀಡಿದೆ.ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ ಇಂದು ಆದೇಶ ಹೊರಡಿಸಿದೆ.
ಇದರಿಂದ ಯಡಿಯೂರಪ್ಪ ಬಂಧನದ ಭೀತಿಯಿಂದ ಪಾರಾಗಿದ್ದಾರೆ.ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮುಗಿದಿದ್ದು, ಇಂದಿಗೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಅದರಂತೆ ಇದೀಗ ಧಾರವಾಡ ಹೈಕೋರ್ಟ್ ಪೀಠ, ಪ್ರಕರಣ ರದ್ದು ಮಾಡುವ ಬದಲು ಜಾಮೀನು ನೀಡಿದೆ. ಹೀಗಾಗಿ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






