ಮುಡಾ ಹಗರಣ: ಇಡಿ ನೋಟಿಸ್ ಗೆ ತಡೆಯಾಜ್ಞೆ- ಸಿಎಂ ಪತ್ನಿ, ಬೈರತಿ ಸುರೇಶ್ ಗೆ ಬಿಗ್ ರಿಲೀಫ್!

ಧಾರವಾಡ:- ಕರ್ನಾಟಕ ಅಷ್ಟೇ ಅಲ್ಲದೇ ಇಡೀ ದೇಶದಲ್ಲೇ ಹೆಚ್ಚು ಚರ್ಚೆ ಹುಟ್ಟು ಹಾಕಿದ್ದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಕೊಟ್ಟಿದ್ದ ಸಮನ್ಸ್ ಪ್ರಶ್ನಿಸಿ ಸಿಎಂ ಪತ್ನಿ ಪಾರ್ವತಿ ಹಾಗೂ ಬೈರತಿ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದರು.
ಇಂದು ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರು 10 ದಿನಗಳ ಕಾಲ ಸಿಎಂ ಪತ್ನಿ ಮತ್ತು ಬೈರತಿ ಸುರೇಶ್ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಿ ಆದೇಶ ಪ್ರಕಟಿಸಿದರು. ಫೆಬ್ರವರಿ 20ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದ್ದು ಅಲ್ಲಿಯವರೆಗೆ ಇಬ್ಬರಿಗೂ ಮಧ್ಯಂತರ ರಕ್ಷಣೆ ಮುಂದುವರಿಯಲಿದೆ.
ಘಟನೆ ಹಿನ್ನೆಲೆ:-
ಮುಡಾ ಹಗರಣದಲ್ಲಿ ಇಡಿ ಮೇಜರ್ ಟ್ವಿಸ್ಟ್ ನೀಡಿತ್ತು. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಮಾಡಿತ್ತು. ಇಡಿ ಬೆಂಗಳೂರು ವಲಯ ಕಚೇರಿಯ ಸಹಾಯಕ ನಿರ್ದೇಶಕ ವಿ. ಮುರಳಿಕೃಷ್ಣನ್ ಅವರು ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಮಾಡಿದ್ದರು. ಇಡಿ ಸಮನ್ಸ್ ಪ್ರಶ್ನಿಸಿ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






