ಮುಡಾ ಹಗರಣ: ಕಾನೂನು ಸಮರಕ್ಕೆ ಮುಂದಾದ ಸಿದ್ದರಾಮಯ್ಯ, ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ!

ಬೆಂಗಳೂರು:- ಕರ್ನಾಟಕ ಸೇರಿ ಇಡೀ ರಾಜ್ಯದಾದ್ಯಂತ ಭಾರೀ ಸಂಕಲನ ಮೂಡಿಸಿದ್ದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ತುರ್ತು ಅವಶ್ಯಕತೆ ಸೃಷ್ಟಿಯಾಗಿದೆ ನವೆಂಬರ್ 23ಕ್ಕೆ ವಿಚಾರಣೆ ನಡೆಸಬೇಕೆಂದು ಮುಖ್ಯಮಂತ್ರಿ ಪರ ವಕೀಲ ಅಭಿಷೇಕ್ ಸಿಂಘ್ವಿ ಮನವಿ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮನವಿ ಆಲಿಸಿ ವಿಚಾರಣೆಯನ್ನು ನವೆಂಬರ್ 23ಕ್ಕೆ ಹೈಕೋರ್ಟ್ ವಿಭಾಗೀಯಪೀಠ ನಿಗದಿಪಡಿಸಿದೆ.
ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದು, ಹೈಕೋರ್ಟ್ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾ ಮಾಡಿದ್ದ ಕರ್ನಾಟಕ ಹೈಕೋರ್ಟ್ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್ನ ವಿಭಾಗೀಯ ಪೀಠವು ನವೆಂಬರ್ 23ರಂದು ವಿಚಾರಣೆ ನಡೆಸಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






