ಮೂರಂತಸ್ತಿನ ಕಟ್ಟಡಕ್ಕೆ ಬೆಂಕಿ: ಇಬ್ಬರು ಕಾರ್ಮಿಕರು ದುರ್ಮರಣ!

ಬೆಂಗಳೂರು:- ಬೆಂಕಿ ಅವಘಡ ಸಂಭವಿಸಿ ಮೂರು ಅಂತಸ್ತಿನ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ಘಟನೆ ಉತ್ತರ ತಾಲೂಕಿನ ಸೀಗೆಹಳ್ಳಿ ಗೇಟ್ ಬಳಿ ನಡೆದಿದೆ.
ಮೃತ ಕಾರ್ಮಿಕರನ್ನು ಉದಯ್ ಭಾನು(40) ಮತ್ತು ಬಿಹಾರ ಮೂಲದ ರೋಷನ್(23) ಎಂದು ಗುರುತಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಗುತ್ತಿಗೆದಾರ ಮತ್ತು ಇಂಜಿನಿಯರ್ ಸತೀಶ್ಗೆ ಸೇರಿದ ಶಿವಾನಿ ಗ್ರೀನ್ ಲೇಔಟ್ನಲ್ಲಿರುವ 3 ಅಂತಸ್ತಿನ ಕಟ್ಟಡದಲ್ಲಿ ಘಟನೆ ನಡೆದಿದೆ. ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ವುಡ್ ವರ್ಕ್ಸ್ ಕೆಲಸ ಮಾಡಲಾಗುತ್ತಿತ್ತು. ಮರ ಫಾಲೀಷ್ ಮಾಡಲು ಥಿನ್ನರ್ ಬಳಕೆ ಮಾಡಲಾಗಿದೆ. ಕೆಮಿಕಲ್ ಕೂಡ ಸಮೀದಲ್ಲೇ ಶೇಕರಣೆ ಮಾಡಲಾಗಿತ್ತು. ಈ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






