ಮೈಸೂರಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ! ಸಾವಿನ ಹಿಂದೆ ಅನುಮಾನದ ಹುತ್ತ

ಫೆಬ್ರವರಿ 17, 2025 - 12:00
 0  23
ಮೈಸೂರಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ! ಸಾವಿನ ಹಿಂದೆ ಅನುಮಾನದ ಹುತ್ತ

ಮೈಸೂರು: ನಗರದ ವಿಶ್ವೇಶ್ವರನಗರದಲ್ಲಿರುವ ಸಂಕಲ್ಪ್ ಸಿರೀನ್ ಹೆಸರಿನ ಅಪಾರ್ಟ್​ಮೆಂಟ್ ಕಾಂಪ್ಲೆಕ್ಸ್​ನಲ್ಲಿ ಅತ್ಯಂತ ದಾರುಣ ಘಟನೆಯೊಂದು ನಿನ್ನೆ ನಡೆದಿದೆ. ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕುಶಾಲ್ ​(15), ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62) ಮೃತ ದುರ್ದೈವಿಗಳು.

 ಚೇತನ್​​​ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್​ಗೆ ವಿಷವುಣಿಸಿ ಸಾಯಿಸಿರುವ ಶಂಕೆ ವ್ಯಕ್ತವಾಗಿದೆ. ಮೂವರಿಗೆ ವಿಷವುಣಿಸಿ ಸಾಯಿಸಿ ಬಳಿಕ ಚೇತನ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. 

ಸ್ಥಳಕ್ಕೆ ಮೈಸೂರು ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರಂ ಇನ್ಸ್​ಪೆಕ್ಟರ್​ ಮೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್ ಮಾತನಾಡಿ, ವಿದ್ಯಾರಣ್ಯಪುರಂ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚೇತನ್ ಕುಟುಂಬ ಹಾಗೂ ಚೇತನ್​ ತಾಯಿ ಪ್ರಿಯಂವಧಾ ಅಕ್ಕಪಕ್ಕದ ಫ್ಲ್ಯಾಟ್​ನಲ್ಲಿ ವಾಸವಿದ್ದರು. ತಾಯಿ ಒಂದು ಕಡೆ ಇದ್ದರು, ಮಗ ಇನ್ನೊಂದು ಕಡೆ ಇದ್ದರು. ತಾಯಿ ಪ್ರಿಯಂವಧಾ ಮತ್ತು ಮಗ ಚೇತನ್ ಕುಟುಂಬ ಒಟ್ಟಾಗಿ ರವಿವಾರ ಗೊರೂರಿಗೆ ಹೋಗಿದ್ದರು ಎಂದು ತಿಳಿಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow