ಮೊಬೈಲ್ ನಲ್ಲೇ ಮುಳುಗಿ ಹೋಗ್ಬೇಡ: ತಾಯಿ ಮಾತಿಗೆ ಮನನೊಂದು ಬಾಲಕಿ ಸೂಸೈಡ್!

ಮುಂಬೈ:- ಮೊಬೈಲ್ ನಲ್ಲೇ ಮುಳುಗಿ ಹೋಗ್ಬೇಡ ಎಂದು ಬುದ್ಧಿವಾದ ಹೇಳಿದ ತಾಯಿ ಮಾತಿಗೆ ಬೇಸರವಾಗಿ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದಲ್ಲಿ ಜರುಗಿದೆ.
ಮಹಾರಾಷ್ಟ್ರದ ಥಾಣೆಯ ಅಂಬರನಾಥ್ ಪ್ರದೇಶದ ನಿವಾಸಿಯಾದ ಬಾಲಕಿ ಸೆಪ್ಟೆಂಬರ್ 26 ರಂದು ವಿಷ ಸೇವನೆ ಮಾಡಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದಂತೆ, ಆಕೆಯನ್ನು ನೆರೆಯ ಮುಂಬೈನ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವಳು ಅಕ್ಟೋಬರ್ 2 ರಂದು ಸಾವನ್ನಪ್ಪಿದಳು ಎಂದು ಅಂಬರನಾಥ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವೈದ್ಯಕೀಯ ವರದಿಯ ಆಧಾರದ ಮೇಲೆ ಶನಿವಾರ ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಂಬರನಾಥ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಅಕ್ಟೋಬರ್ 12 ರಂದು ವೈದ್ಯಕೀಯ ವರದಿ ಆಧರಿಸಿ ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






