ಯಾರೆಷ್ಟೇ ಚೀರಾಡಿದರೂ, ಬಟ್ಟೆ ಹರಿದುಕೊಂಡರೂ, ರಾಜೀನಾಮೆ ಕೊಡಲ್ಲ: ಸಚಿವ ಪ್ರಿಯಾಂಕಾ ಖರ್ಗೆ

ಬೆಂಗಳೂರು: ಬೀದರ್ನ ಯುವ ಗುತ್ತಿಗೆದಾರ ಸಚಿನ್ ಪ್ರಕರಣದ ವಿವಾದ ದಿನದಿಂದ ದಿನಕ್ಕೆ ಜೋರಾಗ್ತಿದೆ. ಸಚಿನ್ ಜೀವ ತೆಗೆದುಕೊಳ್ಳುವುದಕ್ಕೂ ಮುನ್ನ ಬರೆದಿಟ್ಟಿರಿವ ನೋಟ್ ಅನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿ, ಸಚಿವ ಪ್ರಿಯಾಂಕ್ ಖರ್ಗೆಯ ತಲೆದಂಡಕ್ಕೆ ಪಟ್ಟು ಹಿಡಿದು ದೊಡ್ಡ ಮಟ್ಟದ ಹೋರಾಟಕ್ಕೆ ಮುಂದಾಗಿದೆ. ಇದರ ಬೆನ್ನಲ್ಲೇ ಯಾರೆಷ್ಟೇ ಚೀರಾಡಿದರೂ, ಬಟ್ಟೆ ಹರಿದುಕೊಂಡರೂ, ರಾಜೀನಾಮೆ ಕೊಡಲ್ಲ ಎಂದು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನನ್ನ ರಾಜೀನಾಮೆ ಕೇಳಲು ವಿಜಯೇಂದ್ರಾ ಸುಪ್ರೀಂಕೋರ್ಟಾ? ರಾಜು ಕಪನೂರ್ ನನ್ನ ಆಪ್ತ ಅಲ್ಲ ಎಂದು ನಾನು ಹೇಳಿಯೇ ಇಲ್ಲ. ರಾಜು ಕಪನೂರು ಕಾಂಗ್ರೆಸ್ ಸೇರುವ ಮೊದಲು ಬಿಜೆಪಿಯಲ್ಲಿದ್ದರು, ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷರಾಗಿದ್ದರು ಎಂದರು.
ವಿಜಯೇಂದ್ರ ವಿರುದ್ಧ ಮನಿ ಲ್ಯಾಂಡರಿಂಗ್ ಕೇಸ್ ದಾಖಲಾಗಿದೆ, ವಿಜಯೇಂದ್ರ ಯಾಕೆ ರಾಜೀನಾಮೆ ಕೊಡುತ್ತಿಲ್ಲ ಎಂದು ಪ್ರಶ್ನಿಸಿದರು. ಕಲಬುರಗಿ ಮುತ್ತಿಗೆಗೆ ಎಷ್ಟು ಜನ ಬರ್ತೀರಿ ಅಂತಾ ಮೊದಲೇ ಹೇಳಿ, ಅಷ್ಟು ಜನರಿಗೆ ಟೀ ವ್ಯವಸ್ಥೆ ಮಾಡ್ತೇವೆ, ಇಲ್ಲದಿದ್ದರೆ ನೀರನ್ನೂ ಕೊಟ್ಟಿಲ್ಲ ಅಂತಾ ಪ್ರತಿಭಟನೆ ಮಾಡ್ತೀರಾ ಎಂದು ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






