ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಪಂಚ ಗ್ಯಾರಂಟಿಗಳು ನಿಲ್ಲುವುದಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಸುಳಿವು ಕೊಟ್ಟಿದ್ದ ಡಿಸಿಎಂ ಹೇಳಿಕೆ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೇ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರನ್ನು ನಾವು ಇವತ್ತು ನೋಡುತ್ತಿಲ್ಲ. ಡಿಕೆಶಿ ಅಧ್ಯಕ್ಷರಾದಾಗ ಕೋವಿಡ್ ಇತ್ತು. ಆಗ ರಾಜ್ಯದಲ್ಲಿ ಬಹಳಷ್ಟು ಮಹಿಳೆಯರು ಬೆಲೆ ಏರಿಕೆ ಕುರಿತಾಗಿ ದೂರಿದ್ದರು. ಈ ಬಗ್ಗೆ ಏನಾದರೂ ಮಾಡಬೇಕು ಎಂದು ಯೋಚಿಸಿ, ಬೆಲೆ ಏರಿಕೆ ಕಡಿಮೆ ಮಾಡಲು ಈ ಯೋಜನೆಗಳನ್ನು ತಂದರು.
ಶಕ್ತಿ ಯೋಜನೆ ಬಗ್ಗೆ ಯಾವುದೇ ಗೊಂದಲ ಬೇಡ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳು ನಿಲ್ಲುವುದಿಲ್ಲ. ಮುಂದಾಲೋಚನೆ ಇಟ್ಟುಕೊಂಡೆ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಮಹಿಳೆಯರ ಆರ್ಥಿಕ ಸಬಲೀಕರಣ ಮಾಡಲು ಜಾರಿಗೆ ತಂದಿದ್ದೇವೆ. ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಈ ಯೋಜನೆಗಳು ಜಾರಿಯಾಗಿವೆ ಎಂದು ಸ್ಪಷ್ಟನೆ ನೀಡಿದರು.
ಇದರ ಬಗ್ಗೆ ವಿಚಾರ ಮಾಡಿ, ಮಹಿಳೆಯರ ಜೊತೆ ಚರ್ಚೆ, ಸಂವಾದ ಮಾಡಿ ಗ್ಯಾರಂಟಿ ಯೋಜನೆಗಳನ್ನು ಜಾರಿ ತಂದವರು ಡಿಕೆಶಿವಯರೇ. ಅವರ ಉದ್ದೇಶ ಸ್ಪಷ್ಟವಾಗಿದೆ. ಈ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗಿದೆ. ಯಾವುದೇ ಪರಿಸ್ಥಿತಿಯಲ್ಲಿ ಪಂಚ ಗ್ಯಾರಂಟಿಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಹೇಳಿದರು.
ನಿಮ್ಮ ಪ್ರತಿಕ್ರಿಯೆ ಏನು?






