ಯುವರಾಣಿಗೆ ಒಲಿದ ಅದೃಷ್ಟ: ಸ್ಟಾರ್​ ನಟನಿಗೆ ಜೋಡಿಯಾದ ಅಂಕಿತಾ ಅಮರ್!

ಮೇ 14, 2025 - 21:02
 0  12
ಯುವರಾಣಿಗೆ ಒಲಿದ ಅದೃಷ್ಟ: ಸ್ಟಾರ್​ ನಟನಿಗೆ ಜೋಡಿಯಾದ ಅಂಕಿತಾ ಅಮರ್!

ನಮ್ಮನೆ ಯುವರಾಣಿ ಧಾರಾವಾಹಿ ಮೂಲಕ ಅತಿ ಹೆಚ್ಚು ಜನಪ್ರಿಯತೆ ಪಡೆದುಕೊಂಡ ನಟಿ  ಅಂಕಿತಾ ಅಮರ್​ಗೆ ಬಿಗ್ ಆಫರ್ ಸಿಕ್ಕಿದೆ.  ಎಸ್, ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ನಮ್ಮನೆ ಯುವರಾಣಿ ಧಾರಾವಾಹಿ ಯಾರಿಗೆ ತಾನೆ ನೆನಪಿಲ್ಲ? ಅದರಲ್ಲೂ ಮೀರಾ ಪಾತ್ರವನ್ನು ಇಂದಿಗೂ ಜನರು ನೆನಪಿಟ್ಟುಕೊಂಡಿದ್ದಾರೆ ಅಂದ್ರೆ ಅದಕ್ಕೆ ಕಾರಣ ನಟಿ ಅಂಕಿತಾ ಅಮರ್. ಇದೀಗ ರಿಯಲ್ ಸ್ಟಾರ್ ಉಪೇಂದ್ರ ಜೊತೆಗೆ ಅಭಿನಯಿಸುವ ಚಾನ್ಸ್​ವೊಂದು ದೊರಕಿದೆ. 

ಸೀರಿಯಲ್ ಬಳಿಕ ಸೀರಿಯಲ್​ ಬಳಿಕ ರಕ್ಷಿತ್ ಶೆಟ್ಟಿ ನಿರ್ಮಾಣದ ಇಬ್ಬನಿ ತಬ್ಬಿದ ಇಳೆಯಲಿ ಸಿನಿಮಾದಲ್ಲಿ ನಾಯಕಿಯಾಗುವ ಮೂಲಕ ಚಂದನವನಕ್ಕೆ ಎಂಟ್ರಿ ಕೊಟ್ಟಿದ್ದರು. ಇದೀಗ ಅಂಕಿತಾ ಅಮರ್​ ರಿಯಲ್ ಸ್ಟಾರ್ ಉಪೇಂದ್ರ ಅವರ ಜೊತೆಗೆ ಅಭಿನಯಿಸಲಿರುವ ಅವಕಾಶ ಸಿಕ್ಕಿದೆ. ನಾಗಣ್ಣ ನಿರ್ದೇಶನ ಮಾಡುತ್ತಿರುವ ಭಾರ್ಗವ ಸಿನಿಮಾಕ್ಕೆ ಉಪೇಂದ್ರಗೆ ಅಂಕಿತಾ ನಾಯಕಿಯಾಗಿದ್ದಾರೆ. ಇದು ನಾಗಣ್ಣ ಹಾಗೂ ಉಪೇಂದ್ರ ಕಾಂಬಿನೇಶನ್ ನ ಐದನೇ ಸಿನಿಮಾ ಕೂಡ ಆಗಿದೆ. ಇಬ್ಬನಿ ತಬ್ಬಿದ ಇಳಿಯಲಿ ಸಿನಿಮಾದಲ್ಲಿ ಅಂಕಿತಾ ಅಭಿನಯ ನೋಡಿ ಮೆಚ್ಚಿಕೊಂಡಿರುವ ಉಪೇಂದ್ರ, ಭಾರ್ಗವ ಸಿನಿಮಾದಲ್ಲಿ ನಟನೆಗೆ ಹೆಚ್ಚು ಸ್ಕೋಪ್ ಇರೋದರಿಂದ ನಾಯಕಿ ಪಾತ್ರಕ್ಕೆ ಅಂಕಿತಾ ಅವರನ್ನು ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ನಟಿ ಅಂಕಿತಾ ಅಮರ್ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow