ರಾಜ್ಯದಲ್ಲಿ ಮೊಟ್ಟಮೊದಲಿಗೆ ವಿವಿಯ ಪ್ರಾಧ್ಯಾಪಕಿಯಾಗಿ ಮಂಗಳಮುಖಿ ನೇಮಕ! ಇದಪ್ಪಾ ಸಾಧನೆ!

ಡಿಸೆಂಬರ್ 18, 2024 - 18:10
 0  14
ರಾಜ್ಯದಲ್ಲಿ ಮೊಟ್ಟಮೊದಲಿಗೆ ವಿವಿಯ ಪ್ರಾಧ್ಯಾಪಕಿಯಾಗಿ  ಮಂಗಳಮುಖಿ ನೇಮಕ! ಇದಪ್ಪಾ ಸಾಧನೆ!

ಬಳ್ಳಾರಿ:- ಬಳ್ಳಾರಿ ವಿವಿಯ ಪ್ರಾಧ್ಯಾಪಕಿಯಾಗಿ ಮಂಗಳಮುಖಿ ನೇಮಕವಾಗಿದ್ದು, ಕರ್ನಾಟಕದಲ್ಲೇ ಈ ರೀತಿ ಆಗಿದ್ದು ಇದು ಮೊದಲು ಎನ್ನಲಾಗಿದೆ. 

ಮಂಗಳಮುಖಿಯರು ಅಂದ್ರೆ ಬಹಳ ಹೀಳಾಳಿಸುವ ಜನರ ಮಧ್ಯೆ ಇವರು ಮಾದರಿ ಆಗಿದ್ದಾರೆ. ಬಳ್ಳಾರಿ ವಿಶ್ವವಿದ್ಯಾಲಯದ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಮಾದರಿಯಾಗಿದ್ದಾರೆ. 

ಮಂಗಳಮುಖಿಯೊಬ್ಬರು ವಿಶ್ವವಿದ್ಯಾಲಯದ ಪ್ರಾಧ್ಯಾಪಕಿಯಾಗಿರುವುದು ರಾಜ್ಯದಲ್ಲಿ ಇದೇ ಮೊದಲು. ಶಿಕ್ಷಕರಾಗಿ ವಿವಿಧ ಶಾಲೆಗಳಲ್ಲಿ ಮೂವರು ಮಂಗಳಮುಖಿಯರು ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದರಾದರೂ ಉನ್ನತ ಶಿಕ್ಷಣ ಪಡೆದು ಪ್ರಾಧ್ಯಾಪಕಿಯಾಗಿದ್ದು ಇದೇ ಪ್ರಥಮ.

ರೇಣುಕಾ ಪೂಜಾರಿ ಅವರು ಮೂಲತಃ ಬಳ್ಳಾರಿ ಜಿಲ್ಲೆ ಕುರುಗೋಡು ಪಟ್ಟಣದವರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಪೂರ್ಣಗೊಳಿಸಿ, ಪದವಿ ಪೂರ್ವ ಶಿಕ್ಷಣವನ್ನು ಬಳ್ಳಾರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದಾರೆ. ಪದವಿ ಶಿಕ್ಷಣವನ್ನು ಕುರುಗೋಡಿನಲ್ಲಿ ಹಾಗೂ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಅಭ್ಯಾಸ ಮಾಡಿದ್ದಾರೆ ಎನ್ನಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow