ರಾಜ್ಯದ ರೈತರ ಸಮಸ್ಯೆಗಳನ್ನು ಆಲಿಸುವುದಕ್ಕೆಂದೇ ಕರ್ನಾಟಕಕ್ಕೆ ಬಂದಿದ್ದೇನೆ: ಜಗದಾಂಬಿಕಾ ಪಾಲ್

ನವೆಂಬರ್ 7, 2024 - 14:11
 0  9
ರಾಜ್ಯದ ರೈತರ ಸಮಸ್ಯೆಗಳನ್ನು ಆಲಿಸುವುದಕ್ಕೆಂದೇ ಕರ್ನಾಟಕಕ್ಕೆ ಬಂದಿದ್ದೇನೆ: ಜಗದಾಂಬಿಕಾ ಪಾಲ್

ಹುಬ್ಬಳ್ಳಿ: ರಾಜ್ಯದ ರೈತರ ಸಮಸ್ಯೆಗಳನ್ನು ಆಲಿಸುವುದಕ್ಕೆಂದೇ ಕರ್ನಾಟಕಕ್ಕೆ ಬಂದಿದ್ದೇನೆ ಎಂದು ವಕ್ಫ್ ಬೋರ್ಡ್ ಸಂಸದೀಯ ಜಂಟಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದ ರೈತರ ಸಮಸ್ಯೆಗಳನ್ನು ಆಲಿಸುವುದಕ್ಕೆಂದೇ ಕರ್ನಾಟಕಕ್ಕೆ ಬಂದಿದ್ದೇನೆ. ಇಲ್ಲಿನ ರೈತರು ದಶಕಗಳ ಕಾಲ ಉಳಿಮೆ ಮಾಡಿದ ಜಮೀನುಗಳನ್ನು ವಕ್ಫ್ ಬೋರ್ಡ್ ಏಕಾಏಕಿ ತನ್ನದೆಂದು ಹೇಳುತ್ತಿದೆ. ರೈತರು ತಮ್ಮ ಆಸ್ತಿ ಪತ್ರದ ವಿವರಗಳನ್ನು ತಂದಿದ್ದಾರೆ. ರೈತರ ಹೆಸರಲ್ಲಿರು ಭೂ ದಾಖಲೆ ವಿವರ ನೀಡುತ್ತಿದ್ದಾರೆ. ಇನ್ನೂ ರೈತರ ಅಹವಾಲು ಸ್ವೀಕರಿಸುತ್ತೇನೆ ಎಂದರು.

ಕಳೆದ 60-70 ವರ್ಷಗಳಿಂದ ಕೃಷಿ ಮಾಡುತ್ತಿರುವ ಭೂಮಿ ಮೇಲೆ ವಕ್ಫ್ ಬೋರ್ಡ ಹಕ್ಕು ಸಾಧಿಸಲು ಹೊರಟಿದೆ. ಹೀಗಾಗಿ ರೈತರು ಪ್ರತಿಭಟಿಸುತ್ತಿದ್ದಾರೆ. ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ್ದು, ವಿಜಯಪುರ ಜಿಲ್ಲೆಗೂ ಭೇಟಿ ನೀಡುತ್ತಿದ್ದೇನೆ. ಕೇವಲ ರೈತರ ಕೃಷಿ ಭೂಮಿ ಮಾತ್ರವಲ್ಲ, ಪ್ರಾಚ್ಯವಸ್ತು ಇಲಾಖೆಯ ಪಾರಂಪರಿಕ ತಾಣಗಳನ್ನು ಸಹ ವಕ್ಫ್ ತನ್ನದೆಂದು ಪ್ರತಿಪಾದಿಸುತ್ತಿದೆ. ಈ ಬಗ್ಗೆ ಸಹ ಮಾಹಿತಿ ಪಡೆಯಲಿದ್ದೇನೆ. ಈ ಎಲ್ಲ ಬೆಳವಣಿಗೆಗಳ ಬಗ್ಗೆ ಸತ್ಯಾಸತ್ಯತೆ ತಿಳಿದು ವರದಿ ನೀಡುತ್ತೇನೆ ಎಂದು ಜಗದಾಂಬಿಕಾ ಪಾಲ್ ಹೇಳಿದರು.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow