ರಾಜ್ ಕುಂದ್ರಾ ಮನೆ ಮೇಲೆ ಇಡಿ ದಾಳಿ ವಿಚಾರ: ಇದರಲ್ಲಿ ನನ್ನ ಹೆಂಡ್ತಿ ಹೆಸರು ಎಳೆಯಬೇಡಿ ಎಂದ ಉದ್ಯಮಿ!

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ಮನೆಯ ಮೇಲೆ ಜಾರಿ ನಿರ್ದೇಶನ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ರಾಜ್ ಕುಂದ್ರಾ, ತಮ್ಮ ವಿರುದ್ಧ ಬಂದಿರುವ ಆರೋಪ ಸುಳ್ಳು ಎಂಬುದು ಮುಂದೊಂದು ದಿನ ಸಾಬೀತಾಗುತ್ತದೆ ಎಂದಿರುವ ಅವರು, ಈ ಪ್ರಕರಣದಲ್ಲಿ ಪತ್ನಿ ಹೆಸರನ್ನು ಎಳೆದು ತರಬೇಡಿ ಎಂದು ಕೋರಿದ್ದಾರೆ.
ಇದು ಯಾರಿಗೆಲ್ಲ ಸಂಬಂಧಿಸಿದೆಯೋ ಅವರಿಗೆ ನೇರವಾಗಿ ಹೇಳುತ್ತಿದ್ದೇನೆ. ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಿರುವ ತನಿಖೆಗೆ ನಾನು ಸಹಕರಿಸುತ್ತಿದ್ದೇನೆ. ಹಣ ವರ್ಗಾವಣೆ, ಅಶ್ಲೀಲ ಸಿನಿಮಾ ನಿರ್ಮಾಣ ಮತ್ತಿತ್ಯಾದಿ ಪ್ರಕರಣಗಳನ್ನು ಇದು ಒಳಗೊಂಡಿದೆ. ಯಾವುದನ್ನು ಸೆನ್ಸೇಷನ್ ಮಾಡಿದರೂ ಸತ್ಯ ಮರೆ ಆಗುವುದಿಲ್ಲ. ಕೊನೆಯಲ್ಲಿ ಸತ್ಯ ಹೊರಬರಲೇಬೇಕು’ ಎಂದು ಅವರು ಹೇಳಿದ್ದಾರೆ
ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಹೆಸರನ್ನು ಕೂಡ ಎಳೆದು ತರಲಾಗುತ್ತಿದೆ. ಈ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ಪಾತ್ರದ ಬಗ್ಗೆ ಹೇಳಲಾಗುತ್ತಿದೆ. ಇದಕ್ಕೆ ರಾಜ್ಕುಂದ್ರಾ ಸಿಟ್ಟಾಗಿದ್ದಾರೆ. ‘ಸಂಬಂಧಿಸದೇ ಇಲ್ಲದ ವಿಚಾರಗಳಲ್ಲಿ ನನ್ನ ಪತ್ನಿಯ ಹೆಸರನ್ನು ಎಳೆದು ತರಬೇಡಿ’ ಎಂದು ಅವರು ಕೋರಿಕೊಂಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






