ರೇಣುಕಾಸ್ವಾಮಿ ಕೇಸ್:‌ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ!

ನವೆಂಬರ್ 21, 2024 - 18:03
 0  14
ರೇಣುಕಾಸ್ವಾಮಿ ಕೇಸ್:‌ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ!

ಬೆಂಗಳೂರು: ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ.26 ಕ್ಕೆ ಮುಂದೂಡಿದೆ. ಕೊಲೆ ಪ್ರಕರಣದಲ್ಲಿ 131 ದಿನ ಜೈಲಿನಲ್ಲಿದ್ದ ನಟ ದರ್ಶನ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಹೈಕೋರ್ಟ್ 6 ವಾರಗಳ ಕಾಲ ಷರತ್ತುಬದ್ಧ ಜಾಮೀನು ನೀಡಿದೆ. ಜಾಮೀನಿನ ಅವಧಿ ಕೂಡ ಅರ್ಧದಷ್ಟು ಮುಗಿಯುತ್ತಾ ಬಂದಿದೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರೋ ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 ಆದ್ರೆಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಹೆಚ್ಚುವರಿ ಆರೋಪಪಟ್ಟಿ ವಿಚಾರಣಾ ಕೋರ್ಟ್​ಗೆ ಸಲ್ಲಿಸಲಾಯ್ತು. ಅರ್ಹತೆ ಮೇಲೆ ಮುಂದಿನ ದಿನಾಂಕದಂದು ವಿಚಾರಣೆ ನಡೆಸಬಹುದು ಎಂದು ನ್ಯಾಯಮೂರ್ತಿಗಳು ಸೂಚಿಸಿದರು. ವೈದ್ಯಕೀಯ ವರದಿಯ ಪ್ರತಿ ತಮಗೆ ನೀಡಿಲ್ಲವೆಂದು ಎಸ್​ಪಿಪಿ ಆಕ್ಷೇಪಣೆ ಸಲ್ಲಿಸಿದರು. 6 ವಾರಗಳ ಅವಧಿಗೆ ಷರತ್ತಿನ ಮೇಲೆ ಮಧ್ಯಂತರ ಜಾಮೀನು ನೀಡಲಾಗಿದೆ,

ಆದರೆ ಸರ್ಜರಿಯ ದಿನಾಂಕ ತಿಳಿಸಿಲ್ಲವೆಂದು ಎಸ್​ಪಿಪಿ ಪ್ರಸನ್ನಕುಮಾರ್ ವಾದ ಮಂಡಿಸಿದರು. ಅದೇ ವೇಳೆಗೆ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಮತ್ತೊಂದು ವೈದ್ಯಕೀಯ ವರದಿಯನ್ನು ಹೈಕೋರ್ಟ್​ಗೆ ಸಲ್ಲಿಕೆ ಮಾಡಿದರು. ಅದೇ ವೈದ್ಯಕೀಯ ವರದಿಯ ಪ್ರತಿಯನ್ನು ಎಸ್​ಪಿಪಿ ಪ್ರಸನ್ನ ಕುಮಾರ್ ಅವರಿಗೆ ನೀಡಲಾಯ್ತು. ವರದಿ ಪರಿಶೀಲಿಸಿ ಪ್ರತಿಕ್ರಿಯಿಸಲು ಸೂಚನೆ ನೀಡಿದ ನ್ಯಾಯಮೂರ್ತಿಗಳು ನವೆಂಬರ್ 26ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow