ರೇಣುಕಾಸ್ವಾಮಿ ಕೊಲೆ ಪ್ರಕರಣ: ಡಿ ಗ್ಯಾಂಗ್‌ʼನ ಮೊದಲ ಆರೋಪಿಗೆ ಜಾಮೀನು!

ಸೆಪ್ಟೆಂಬರ್ 23, 2024 - 16:14
 0  20
ರೇಣುಕಾಸ್ವಾಮಿ ಕೊಲೆ ಪ್ರಕರಣ: ಡಿ ಗ್ಯಾಂಗ್‌ʼನ ಮೊದಲ ಆರೋಪಿಗೆ ಜಾಮೀನು!

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ 110 ಕ್ಕೂ ಹೆಚ್ಚು ದಿನಗಳಾಗಿವೆ. ಇತ್ತೀಚೆಗಷ್ಟೇ ದರ್ಶನ್​ ಅವರು ಬೇಲ್​ ಸಲುವಾಗಿ ಅರ್ಜಿ ಸಲ್ಲಿಸಿದ್ದರು. ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್​ 27ಕ್ಕೆ ಮುಂದೂಡಲಾಗಿದೆ. ಸದ್ಯ ಅವರು ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟೆಂಬರ್​ 25ಕ್ಕೆ ಮುಂದೂಡಿಕೆ ಆಗಿದೆ.

ಇನ್ನೂ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ16 ಆಗಿರುವ ಕೇಶವಮೂರ್ತಿಗೆ ಜಾಮೀನು ಮಂಜೂರು ಮಾಡಲಾಗಿದೆ. ಹೈಕೋರ್ಟ್​ನಿಂದ ಕೇಶವಮೂರ್ತಿಗೆ ಜಾಮೀನು ನೀಡಲಾಗಿದೆ. ತುಮಕೂರು ಜೈಲಿನಲ್ಲಿರುವ 16ನೇ ಆರೋಪಿ ಕೇಶವಮೂರ್ತಿಗೆ ಸದ್ಯಕ್ಕೆ ರಿಲೀಫ್​ ಸಿಕ್ಕಿದೆ. ಇನ್ನುಳಿದ ಆರೋಪಿಗಳು ಜಾಮೀನು ಪಡೆಯಲು ಯತ್ನಿಸುತ್ತಿದ್ದಾರೆ.

ಆರಂಭದಲ್ಲಿ ಕೇಶವಮೂರ್ತಿ ಕೊಲೆಯಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ತನಿಖೆ ವೇಳೆ ಕೊಲೆಯಲ್ಲಿ ಭಾಗಿಯಾಗಿಲ್ಲ. ಸಾಕ್ಷಿನಾಶ ಮಾಡಲು ಮುಂದಾಗಿದ್ದ ವಿಚಾರ ಬೆಳಕಿಗೆ ಬಂದಿತ್ತು. ಹೀಗಾಗಿ ಪೊಲೀಸರು ಸಾಕ್ಷ್ಯನಾಶ ಆಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಕೊಲೆಯಲ್ಲಿ ನೇರವಾಗಿ ಭಾಗಿಯಾಗದ ಕಾರಣ ಕೇಶವಮೂರ್ತಿಗೆ ಇಂದು ಜಾಮೀನು ಸಿಕ್ಕಿದೆ.

 ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow