ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಪ್ರಕರಣ; 9 ಮಂದಿಗೆ ಗಂಭೀರ ಗಾಯ!

ಮುಂಬೈ:- ಜನರ ನೂಕುನುಗ್ಗಲಿಂದಾಗಿ ಕಾಲ್ತುಳಿತದ ದುರ್ಭಟನೆ ಸಂಭವಿಸಿ 9 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರ ರಾಜಧಾನಿನಗರಿಯ ಬಾಂದ್ರಾ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ವೊಂದರಲ್ಲಿ ಜರುಗಿದೆ.
ಗಾಯಾಳುಗಳನ್ನು ಶಬೀರ್ ಅಬ್ದುಲ್ ರೆಹಮಾನ್ (40), ಪರಮೇಶ್ವರ್ ಸುಖದರ್ ಗುಪ್ತಾ (28), ರವೀಂದ್ರ ಹರಿಹರ್ ಚುಮಾ (30), ರಾಮಸೇವಕ್ ರವೀಂದ್ರ ಪ್ರಸಾದ್ ಪ್ರಜಾಪತಿ (29), ಸಂಜಯ್ ತಿಲಕ್ರಾಮ್ ಕಂಗಯ್ (27), ದಿವ್ಯಾಂಶು ಯೋಗೇಂದ್ರ ಯಾದವ್ (18), ಮೊಹಮ್ಮದ್ ಶರೀಫ್ ಶೇಖ್ (25), ಇಂದ್ರಜಿತ್ ಸಹಾನಿ (19), ಮತ್ತು ನೂರ್ ಮೊಹಮ್ಮದ್ ಶೇಖರ್ (18) ಎಂದು ಗುರುತಿಸಲಾಗಿದೆ.
ಸದ್ಯ, ಗಾಯಾಳುಗಳನ್ನು ಭಾಭಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಂದ್ರಾ ಟರ್ಮಿನಸ್ನ ಪ್ಲಾಟ್ಫಾರ್ಮ್ 1ರಲ್ಲಿ ಬಾಂದ್ರಾ ಗೋರಖ್ಪುರ್ ಎಕ್ಸ್ಪ್ರೆಸ್ ರೈಲಿಗಾಗಿ ದೊಡ್ಡ ಸಂಖ್ಯೆಯಲ್ಲಿ ಜನರು ಕಾಯುತ್ತಿದ್ದರು. ದೀಪಾವಳಿ ಆದ ಕಾರಣ ತಂತಮ್ಮ ಊರುಗಳಿಗೆ ಹೋಗಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ರೈಲ್ವೆ ಸ್ಟೇಷನ್ನಲ್ಲಿ ಇದ್ದರು. ಟ್ರೈನ್ ಹತ್ತುವಾಗ ನೂಕುನುಗ್ಗುಲು
ತೀವ್ರಗೊಂಡು ಕಾಲ್ತುಳಿತವಾಗಿದೆ. ಗಾಯಗೊಂಡ ಒಂಬತ್ತು ಮಂದಿ ಪೈಕಿ ಏಳು ಮಂದಿ ಸ್ಥಿತಿ ಚಿಂತೆ ಪಡುವಷ್ಟು ಇಲ್ಲ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಂದ್ರಾದಿಂದ ಗೋರಖ್ಪುರಕ್ಕೆ ಹೋಗಲು ಟ್ರೈನ್ ನಂಬರ್ 22921 ನಿಂತಿತ್ತು. ಅವಘಡದ ಸ್ಥಳದ ದೃಶ್ಯಾವಳಿ ಹರಿದಾಡುತ್ತಿದ್ದು, ಒಂದನೇ ಪ್ಲಾಟ್ಫಾರ್ಮ್ನ ನೆಲದ ಮೇಲೆ ರಕ್ತದ ಕಲೆಗಳು ಕಾಣಸಿಗುತ್ತಿತ್ತು. ರೈಲ್ವೆ ಪೊಲೀಸ್ ಮತ್ತು ಇತರ ಪ್ರಯಾಣಿಕರು ಗಾಯಾಳುಗಳಿಗೆ ನೆರವಾಗುತ್ತಿದ್ದುದನ್ನು ಈ ದೃಶ್ಯಗಳಲ್ಲಿ ಕಂಡುಬಂದಿವೆ
ನಿಮ್ಮ ಪ್ರತಿಕ್ರಿಯೆ ಏನು?






