ಲವರ್ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಪತ್ನಿ ಅರೆಸ್ಟ್!
ಚಿಕ್ಕಮಗಳೂರು:- ಲವರ್ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಪತ್ನಿಯನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಮೀನಾಕ್ಷಿ ಬಂಧಿತ ಮಹಿಳೆ. ಕಡೂರು ಪೊಲೀಸರ ನಿರಂತರ ತನಿಖೆಯಿಂದ ಎರಡು ತಿಂಗಳ ಬಳಿಕ ಹತ್ಯೆ ಕಹಾನಿಯ ಅಸಲಿ ಸತ್ಯ ಬಯಲಾಗಿದೆ. 55 ವರ್ಷದ ಮೀನಾಕ್ಷಿ ಮತ್ತು 33 ವರ್ಷದ ಪ್ರದೀಪ್ ಮಧ್ಯೆ ಲವ್ವಿ-ಡವ್ವಿ ನಡೆದಿತ್ತು.
ಈ ಅನೈತಿಕ ಸಂಬಂಧದ ಗುಟ್ಟು ಎಲ್ಲಿ ಬಯಲಾಗುತ್ತೆ ಎಂದು ತನ್ನ ಗಂಡನ ಕೊಲೆಗೆ ಪತ್ನಿ ಸ್ಕೆಚ್ ಹಾಕಿದ್ದಳು. ಪ್ರದೀಪ್ ಜೊತೆಗಿನ ಅನೈತಿಕ ಸಂಬಂಧದ ಬಗ್ಗೆ ಇತ್ತ ಸುಬ್ರಹ್ಮಣ್ಯಗೂ ಅನುಮಾನ ಮೂಡಿತ್ತು. ಹೀಗಾಗಿ ಸುಬ್ರಹ್ಮಣ್ಯನನ್ನು ಹತ್ಯೆ ಮಾಡುವಂತೆ ಪ್ರದೀಪ್ಗೆ ಮೀನಾಕ್ಷಿ ತಿಳಿಸಿದ್ದಳು. ಅವಳ ಸೂಚನೆ ಮೇರೆಗೆ ಸ್ನೇಹಿತರ ಜೊತೆ ಸೇರಿ ಪ್ರದೀಪ್ ಹತ್ಯೆ ಮಾಡಿದ್ದ.
ಪ್ರಿಯಕರ ಪ್ರದೀಪ್ಗೆ ಮಾಹಿತಿ ನೀಡಿ ಹತ್ಯೆ ಮಾಡಿಸಿದ್ದ ಮೀನಾಕ್ಷಿ, ಜೂನ್ 2 ರಂದು ಗಂಡ ನಾಪತ್ತೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಪ್ರದೀಪ್ ತಾಯಿಯ ಮೊಬೈಲ್ ಮೂಲಕ ಆತನೊಂದಿಗೆ ಸಂಪರ್ಕದಲ್ಲಿದ್ದಳು. ಪೊಲೀಸರಿಗೆ ಚಿಕ್ಕ ಸುಳಿವು ಸಿಗದಂತೆ ಪ್ರಕರಣದಿಂದ ಮೀನಾಕ್ಷಿ ಬಚಾವ್ ಆಗಿದ್ದಳು. ಆದರೆ ಕಡೂರು ಪೊಲೀಸರ ನಿರಂತರ ತನಿಖೆಯಿಂದ ಜೂನ್ 8 ರಂದು ಆರೋಪಿಗಳಾದ ಪ್ರದೀಪ್, ಸಿದ್ದೇಶ್ ಮತ್ತು ವಿಶ್ವಾಸ್ ಎಂಬಾತನನ್ನು ಬಂಧಿಸಿದ್ದರು.
ಅನೈತಿಕ ಸಂಬಂಧಕ್ಕೆ ಅಡ್ಡಿ, ಹಣದ ವ್ಯವಹಾರಕ್ಕೆ ಹತ್ಯೆ ಮಾಡಲಾಗಿದೆ ಎಂದು ಆರೋಪಿ ಪ್ರದೀಪ್ ವಿಚಾರಣೆ ವೇಳೆ ಬಾಯಿಬಿಟ್ಟಿದ್ದ. ಆರೋಪಿಗಳ ಬಂಧನವಾಗಿ 2 ತಿಂಗಳ ಬಳಿಕ ಇದೀಗ ಕಡೂರು ಪೊಲೀಸರಿಂದ ಮೀನಾಕ್ಷಿ ಬಂಧನವಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?