ವಿಜಯಪುರ: ಗುಮ್ಮಟ ನಗರಿಯಲ್ಲಿ ಭೂಕಂಪ: ಬೆಚ್ಚಿ ಬಿದ್ದ ಜನತೆ!

ವಿಜಯನಗರ:- ಗುಮ್ಮಟನಗರಿ ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪ ಸಂಭವಿಸಿದ್ದು, 3.1 ತೀವ್ರತೆ ದಾಖಲಾಗಿದೆ. ಇದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ.
ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 3.1 ಎಂದು ಅಳೆಯಲಾಗಿದೆ. ಭೂಕಂಪದಿಂದಾಗಿ
ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ, ಭೂಮಿ ನಡುಗುತ್ತಿದ್ದಂತೆಯೇ ಆತಂಕಗೊಂಡ ಜನತೆ ಮನೆಗೆ ಹಾಗೂ ತಾವಿದ್ದ ಸ್ಥಳದಿಂದ ಓಡಲು ಆರಂಭಿಸಿದ್ದರು.
ಇತ್ತೀಚೆಗೆ ಕೆಲ ದಿನಗಳಿಂದ ವಿಜಯನಗರ ಹಾಗೂ ಕಲಬುರಗಿ ಸುತ್ತಮುತ್ತ ಆಗಾಗ ಭೂಕಂಪನದ ಅನುಭವವಾಗುತ್ತಲೇ ಇದೆ.
ನಿಮ್ಮ ಪ್ರತಿಕ್ರಿಯೆ ಏನು?






