ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ: ತನಿಖೆಗೆ SITಗೆ ಸರ್ಕಾರ ಆದೇಶ

ಬೆಂಗಳೂರು: ಜಾತಿ ನಿಂದನೆ, ಮಹಿಳೆ ಮತ್ತು ಒಕ್ಕಲಿಗರ ವಿರುದ್ಧ ಅಹವೇಳನಕಾರಿ ಪದ ಬಳಕೆ ಆಡಿಯೋ ವೈರಲ್ ಬೆನ್ನಲ್ಲೇ ಶಾಸಕ ಮುನಿರತ್ನ ಅವರಿಗೆ ನೋಟಿಸ್ ಕೊಟ್ಟ ಶಿಸ್ತು ಸಮಿತಿ ನಡೆದ ಬಿಜೆಪಿಯಲ್ಲಿ ಅಪಸ್ವರ ಎದುರಾಗಿದೆ. ಪಕ್ಷದ ಕೆಲವು ಮುಖಂಡರು ‘ತರಾತುರಿಯ ನೋಟಿಸ್’ ಗೆ ಅಸಮಾಧಾನ ಹೊರಹಾಕಿದ್ದಾರೆ.
ಇದರ ಬೆನ್ನಲ್ಲೇ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದೆ.
ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದರು. ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿತ್ತು.
ಒಂದು ಪ್ರಕರಣದಲ್ಲಿ ಜಾಮೀನು ಪಡೆದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರುತ್ತಿದ್ದಂತೆ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿದ್ದರು. ಮಾಗಡಿ ಡಿವೈಎಸ್ಪಿ ಪ್ರವೀಣ್ ಹಾಗೂ ರಾಮನಗರ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ತಂಡ 7 ಜೀಪುಗಳು, ಒಂದು ಮೀಸಲು ಪಡೆಯ ವಾಹನ ಭದ್ರತೆಯಲ್ಲಿ ಶಾಸಕ ಮುನಿರತ್ನ ಅವರನ್ನ ಬಂಧಿಸಲಾಗಿತ್ತು.
ನಿಮ್ಮ ಪ್ರತಿಕ್ರಿಯೆ ಏನು?






