ಸಂಕಷ್ಟದಲ್ಲಿ ಮುನಿರತ್ನ: ಮತ್ತೆ 14 ದಿನ ಜೈಲು ಪಾಲಾದ BJP ಶಾಸಕ!

ಬೆಂಗಳೂರು: ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಕೇಸ್ನಲ್ಲಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ನೀಡಿದೆ. ಆದರೆ ಅತ್ಯಾಚಾರ ಕೇಸ್ನಲ್ಲಿ ಬಿಜೆಪಿ ಶಾಸಕ ಮತ್ತೆ ಲಾಕ್ ಆಗಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ.
ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರನ್ನು ಸುತ್ತಿಕೊಂಡಿತ್ತು. ಮುನಿರತ್ನನ್ನು ಪೊಲೀಸರು ಶನಿವಾರ ಕೋರ್ಟ್ಗೆ ಹಾಜರುಪಡಿಸಿದ್ದು, ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.
ನಿಮ್ಮ ಪ್ರತಿಕ್ರಿಯೆ ಏನು?






