ಸಫಾರಿ ವಾಹನದ ಮೇಲೆ ಕಾಡಾನೆ ದಾಳಿ: ಆಮೇಲೇನಾಯ್ತು?
ಚಾಮರಾಜನಗರ:- ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಸಫಾರಿಯಲ್ಲಿ ಸಫಾರಿ ವಾಹನದ ಮೇಲೆ ಕಾಡಾನೆಯೊಂದು ದಾಳಿಗೆ ಯತ್ನಿಸಿದ ಘಟನೆ ಜರುಗಿದೆ.
ಸಫಾರಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆಯೊಂದು ಸಫಾರಿ ಜೀಪ್ ಕಂಡ ಕೂಡಲೇ ಅಟ್ಟಾಡಿಸಿಕೊಂಡು ಬಂದಿದೆ. ಈ ವೇಳೆ ಚಾಲಕ ಎಚ್ಚೆತ್ತುಕೊಂಡು ಜೀಪ್ ಅನ್ನು ರಿವರ್ಸ್ ಚಲಾಯಿಸಿ ಅಪಾಯದಿಂದ ಪಾರಾಗಿದ್ದಾರೆ.
ಈ ವೇಳೆ ಕೋಪಗೊಂಡ ಕಾಡಾನೆ ನೆಲಕ್ಕೆ ಕಾಲು ಕೆರೆದು ವಾರ್ನಿಂಗ್ ಕೊಟ್ಟಿದೆ. ಸಫಾರಿ ಜೀಪ್ ಅನ್ನು ಕಾಡಾನೆ ಅಟ್ಟಾಡಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಿಮ್ಮ ಪ್ರತಿಕ್ರಿಯೆ ಏನು?