ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಾಂಬ್ ಸ್ಫೋಟಿಸಿದ್ದ ಆಡಿಯೋ ನನ್ನದೇ: ಬಿ.ಆರ್ ಪಾಟೀಲ್

ಬೆಂಗಳೂರು: ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ಹಣ ನೀಡಿದವರಿಗಷ್ಟೇ ಮನೆ ಮಂಜೂರು ಸಿಗುತ್ತಿದೆ ಅಂತಾ ಕಾಂಗ್ರೆಸ್ ಶಾಸಕ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಸಂಬಂಧಿಸಿದ ಆಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಇನ್ನೂ ಈ ವಿಚಾರವಾಗಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಾಂಬ್ ಸ್ಫೋಟಿಸಿದ್ದ ಆಡಿಯೋ ನನ್ನದೇ.. ಆಡಿಯೋದಲ್ಲಿ ಮಾತಾಡಿರೋದು ನಾನೇ ಎಂದು ಶಾಸಕ ಬಿ.ಆರ್ ಪಾಟೀಲ್ ಒಪ್ಪಿಕೊಂಡಿದ್ದಾರೆ. ಆಡಿಯೋದಲ್ಲಿ ನಾನು ಸತ್ಯವನ್ನೇ ಹೇಳಿದ್ದೇನೆ. ಈ ವಿಚಾರವಾಗಿ ಸಿಎಂ ನನ್ನನ್ನು ಕರೆದಿಲ್ಲ.
ಸಿಎಂ ಸಿದ್ದರಾಮಯ್ಯ ಕರೆದರೆ ಹೋಗಿ ಮಾತಾಡುತ್ತೇನೆ. ಹೈಕಮಾಂಡ್ಗೆ ಯಾಕೆ ನಾನು ಹೇಳಲಿ? ಈ ರೀತಿ ವಸತಿ ಇಲಾಖೆಯಲ್ಲಿ ನಡೆದಿಲ್ಲವಾದರೆ ಸಚಿವ ಜಮೀರ್ ತನಿಖೆ ಮಾಡಿಸಲಿ. ಎಲ್ಲ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಬಿಜೆಪಿಯವರೇನು ಸಾಚಾಗಳಲ್ಲ. ಅವರ ಕಾಲದಲ್ಲೂ ಇದೆಲ್ಲ ಆಗಿದೆ ಎಂದಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






