ಸ್ವಾಮೀಜಿಯಾಗಲು ನಾಲಾಯಕ್. ಕಾವಿ ಬಟ್ಟೆ ಬಿಚ್ವಿಟ್ಟು ಬರುವುದು ಉತ್ತಮ: ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಕೆಎಸ್ ಶಿವರಾಮು ಕಿಡಿ

ಮೈಸೂರು: ಬೆಳಗಾವಿಯಲ್ಲಿ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಮಾಡಿದ ವಿಚಾರ ತೀವ್ರ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೇ ಸ್ವಾಮೀಜಿಯಾಗಲು ನಾಲಾಯಕ್. ಕಾವಿ ಬಟ್ಟೆ ಬಿಚ್ವಿಟ್ಟು ಬರುವುದು ಉತ್ತಮ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆಎಸ್ ಶಿವರಾಮು ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಜಯಮೃತ್ಯುಂಜಯ ಸ್ವಾಮೀಜಿ ಹೋರಾಟವನ್ನು ಖಂಡಿಸುತ್ತಿದ್ದೇವೆ. ಸ್ವಾಮೀಜಿಗಳು ರಾಜಕೀಯ ಪುಢಾರಿ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಅವಹೇಳನಕಾರಿಯಾಗಿ ಮಾತನಾಡುತ್ತಾರೆ. ಅವರು ಸನ್ಯಾಸಿಯಾಗಿ ಒಂದು ಜಾತಿ ಪರವಾಗಿ ಕೆಲಸ ಮಾಡುವುದು ಸರಿಯಲ್ಲ. ಸ್ವಾಮೀಜಿಯಾಗಲು ನಾಲಾಯಕ್. ಕಾವಿ ಬಟ್ಟೆ ಬಿಚ್ವಿಟ್ಟು ಬರುವುದು ಉತ್ತಮ ಎಂದು ಕೆಎಸ್ ಶಿವರಾಮು ಹೇಳಿದ್ದಾರೆ.
ಕಾವಿ ಬಟ್ಟೆಗೆ ನಾವು ಗೌರವ ಕೊಡುತ್ತಾ ಇದ್ದೇವೆ. ಅದನ್ನು ಉಳಿಸಿಕೊಳ್ಳಿ. ಮೀಸಲಾತಿ ವಿಚಾರ ಸುಪ್ರೀಂ ಕೋರ್ಟ್ನಲ್ಲಿ ಇದೆ. ಸ್ವಾಮೀಜಿಯಾಗಿ ಹಿಂಸಾಚಾರಕ್ಕೆ ಕುಮ್ಮಕ್ಕು ಕೊಡುತ್ತಾ ಇದ್ದೀರಿ. ಇದೇನಾ ನಿಮ್ಮ ರೀತಿ ನೀತಿ? ಹಿಂದುಳಿದ ವರ್ಗಗಳು ವೀರಶೈವರು, ಲಿಂಗಾಯತರು ಒಂದಾಗಿ ಇದ್ದೇವೆ. ನಮ್ಮಗಳ ಮಧ್ಯೆ ಜಗಳ ತಂದು ಹಾಕುತ್ತಾ ಇದ್ದೀರಿ ಎಂದು ಶಿವರಾಮು ಕಿಡಿಕಾರಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡುತ್ತಾ ಇದ್ದಾರೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಸುಪಾರಿ ಪಡೆದುಕೊಂಡಿದ್ದಾರೆ ಎಂದು ಶಿವರಾಮು ಆರೋಪಿಸಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






