ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ! ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ - ಕಲ್ಲು ತೂರಾಟ

ಬೆಳಗಾವಿ: ಅತ್ತ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದಲ್ಲಿ ಅಧಿವೇಶನ ನಡೆಯುತ್ತಿದೆ. ಇನ್ನೊಂದೆಡೆ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗುತ್ತಿದೆ. ಹೌದು ಪಂಚಮಸಾಲಿಗೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿದ್ದ ಹೋರಾಟ ಹಿಂಸಾರೂಪ ಪಡೆದುಕೊಂಡಿದ್ದು,
ಸುವರ್ಣಸೌಧ ಮುತ್ತಿಗೆ ಹಾಕಲು ಆಗಮಿಸುತ್ತಿದ್ದ ಪಂಚಮಸಾಲಿ ಹೋರಾಟಗಾರರನ್ನು ಪೋಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ-ನೂಕಾಟ ನಡೆದಿದೆ.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರ ಗುಂಪು ಪೊಲೀಸರ ಮೇಲೆ ಚಪ್ಪಲಿ ಎಸೆದು, ಕಲ್ಲು ತೂರಾಟ ನಡೆಸಿದೆ. ಇದರಿಂದ ಪೊಲೀಸರು ಕೂಡ ಉದ್ರಿಕ್ತರ ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಅದಲ್ಲದೆ ಪ್ರತಿಭಟನಕಾರರು ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಪೊಲೀಸರು ಲಾಠಿಚಾರ್ಜ್ ಆರಂಭಿಸಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






