ಹುಬ್ಬಳ್ಳಿ ಸಿಲಿಂಡರ್ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು - 6ಕ್ಕೇರಿದ ಸಾವಿನ ಸಂಖ್ಯೆ

ಹುಬ್ಬಳ್ಳಿಯ ಸಾಯಿನಗರದಲ್ಲಿ ಡಿಸೆಂಬರ್ 22 ರಂದು ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮಂಜುನಾಥ ವಾಗ್ಮೋಡೆ (22 ) ಮೃತ ಮಾಲಾಧಾರಿ ಮೃತ ಮಂಜುನಾಥ ಎರಡನೇ ವರ್ಷ ಡಿಪ್ಲೊಮಾ ಓದುತ್ತಿದ್ದರು.
ಎರಡನೇ ವರ್ಷ ಅಯ್ಯಪ್ಪ ವೃತ ಮಾಡಲು ಮಾಲೆ ಹಾಕಿದ್ದರು. ಇವತ್ತು ಒಂದೇ ದಿನ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ತಡರಾತ್ರಿ ಶಂಕರ ಚವ್ಹಾಣ್ ಮೃತಪಟ್ಟರೆ, ಬೆಳಗ್ಗೆ ಮಂಜುನಾಥ ವಾಗ್ಮೋಡೆ ಮೃತಪಟ್ಟಿದ್ದಾರೆ. ಗಾಯಗೊಂಡ 9 ಜನರಲ್ಲಿ ಸದ್ಯಕ್ಕೆ ಐವರು ಮೃತಪಟ್ಟಿದ್ದಾರೆ. ಇನ್ನುಳಿದ ಮೂರು ಜನರಿಗೆ ಚಿಕಿತ್ಸೆ ಮುಂದುವರೆದಿದ್ದು,
ಅವರಲ್ಲಿ ಇಬ್ಬರ ಸ್ಥಿತಿ ಇನ್ನೂ ಗಂಭೀರವಾಗಿದೆ. ಓರ್ವರಲ್ಲಿ ಚೇತರಿಕೆ ಕಂಡು ಬಂದಿದೆ. 9 ಜನ ಮೂಲಾಧಾರಿಗಳ ಪೈಕಿ 12 ವರ್ಷದ ವಿನಾಯಕ್ ಬಾರಕೇರ ಮಾತ್ರ ಚಿಕಿತ್ಸೆಗೆ ಸ್ಪಂದಿಸಿದ್ದಾನೆ. ಹೀಗಾಗಿ, ಬಾಲಕನನ್ನು ಐಸೋಲೇಶನ್ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






