ಹೆಂಡ್ತಿಯ ಕಿರುಕುಳ: ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್ವೇರ್ ಇಂಜಿನಿಯರ್!

ಹಾಸನ: ಹೆಂಡತಿಯ ಕಿರುಕುಳ ತಾಳಲಾರದೆ ಮನನೊಂದು ಸಾಫ್ಟ್ವೇರ್ ಇಂಜಿನಿಯರ್! ಓರ್ವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ಬೆಂಗಳೂರಿನ ಬೆಂಜ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೋದ್ ಮೃತ ದುರ್ದೈವಿ. ಪ್ರಮೋದ್ ಡಿಸೆಂಬರ್ 29 ರಂದು ಮನೆಯಿಂದ ಹೊರಗೆ ಹೋಗಿದ್ದರು. ಆ ಬಳಿಕ ನಾಪತ್ತೆಯಾಗಿದ್ದರು. ಗೊರೂರು ಸಮೀಪ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರಮೋದ್ ಶವ ನೋಡಲು ಪತ್ನಿಯೂ ಬಂದಿದ್ದು, ಇದೇ ವೇಳೆ ಹೈಡ್ರಾಮಾ ನಡೆದಿದೆ. ತಾಯಿ ಹಾಗೂ ಮಗು ಜೊತೆ ಪತಿ ಶವ ನೋಡಲು ಪತ್ನಿ ಬಂದಿದ್ದಾರೆ. ಈ ವೇಳೆ ಪತ್ನಿ ಕುಟುಂಬ ಸದಸ್ಯರು ಹಾಗೂ ಪ್ರಮೋದ್ ಕುಟುಂಬ ಸದಸ್ಯರ ನಡುವೆ ವಾಗ್ವಾದ ನಡೆದಿದೆ. ಪತ್ನಿಯನ್ನು ಪ್ರಮೋದ್ ಕುಟುಂಬ ಸದಸ್ಯರು ಬೆನ್ನಟ್ಟಿದ್ದಾರೆ. ನಂತರ ಪತ್ನಿ ಹಾಗೂ ಆಕೆಯ ತಾಯಿಯನ್ನು ಪೊಲೀಸರು ರಕ್ಷಿಸಿ ಕರೆದೊಯ್ದರು. ಜನರನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಡುವಂತಾಯಿತು.a
ನಿಮ್ಮ ಪ್ರತಿಕ್ರಿಯೆ ಏನು?






