12 ವರ್ಷದ ಬಾಲಕ ಸೂಸೈಡ್: ಡೆತ್ ನೋಟ್ ನಲ್ಲಿತ್ತು ಕ್ಷಮಯಾಚನೆ! ಅಂತದ್ದೇನಾಯ್ತು!

ಮೇ 24, 2025 - 22:20
 0  11
12 ವರ್ಷದ ಬಾಲಕ ಸೂಸೈಡ್: ಡೆತ್ ನೋಟ್ ನಲ್ಲಿತ್ತು  ಕ್ಷಮಯಾಚನೆ! ಅಂತದ್ದೇನಾಯ್ತು!

ಕೋಲ್ಕತಾ:- ಪಶ್ಚಿಮ ಬಂಗಾಳದಲ್ಲಿ 12 ವರ್ಷದ ಬಾಲಕನೋರ್ವ ಡೆತ್ ನೋಟ್ ಬರೆದಿಟ್ಟು ಸೂಸೈಡ್ ಮಾಡಿಕೊಂಡಿದ್ದಾನೆ. ಚಿಪ್ಸ್​ ಪ್ಯಾಕೇಟ್​ ಕದ್ದ ಆರೋಪದ ಮೇಲೆ ನಾಲ್ಕು ಜನರ ಎದುರು ಅಂಗಡಿಯವ ಬೈದಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

7 ನೇ ತರಗತಿಯ ವಿದ್ಯಾರ್ಥಿ ಕೃಷ್ಣೇಂದು ದಾಸ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಚಿಪ್ಸ್ ಖರೀದಿಸಲು ಅಂಗಡಿಯೊಂದಕ್ಕೆ ಹೋಗಿದ್ದ ಎಂದು ವರದಿಯಾಗಿದೆ.  ಶುಭಂಕರ್ ದೀಕ್ಷಿತ್ ಎಂದು ಗುರುತಿಸಲಾದ ಅಂಗಡಿಯವನಿಗೆ ಪದೇ ಪದೇ ಕರೆದರೂ ಆತ ಉತ್ತರಿಸಿರಲಿಲ್ಲ, ಅಂಕಲ್ ನಾನು ಚಿಪ್ಸ್​ ತೆಗೆದುಕೊಳ್ಳುತ್ತಿದ್ದೇನೆ ಎಂದು ಹೇಳಿದರೂ ಆ ಕಡೆಯಿಂದ ಪ್ರತಿಕ್ರಿಯೆ ಬಂದಿರಲಿಲ್ಲ, ಅಂಗಡಿಯವರು ಇಲ್ಲ ಆಮೇಲೆ ಹಣ ಕೊಟ್ಟರಾಯ್ತು ಎಂದು ಹೇಳಿ ಪ್ಯಾಕೆಟ್​ ತೆಗೆದುಕೊಂಡಿದ್ದಾನೆ.

ಕೆಲವು ಕ್ಷಣಗಳ ಬಳಿಕ, ಅಂಗಡಿಯವನು ಹಿಂತಿರುಗಿ ಬಂದು, ಕೃಷ್ಣೇಂದು ಹಿಂದೆಯೇ ಬಂದು , ಕಪಾಳಮೋಕ್ಷ ಮಾಡಿ, ಬ್ಸಕಿ ಹೊಡೆಸಿದ್ದಾರೆ ಎಂದು ಕುಟುಂಬ ದೂರಿನಲ್ಲಿ ತಿಳಿಸಿದ್ದಾರೆ. ಬಾಲಕನ ತಾಯಿಯನ್ನು ಸ್ಥಳಕ್ಕೆ ಕರೆಸಿ ಗದರಿಸಲಾಯಿತು. ಕೃಷ್ಣೇಂದು ಚಿಪ್ಸ್​ಗೆ ಹಣ ಕೊಡಬೇಕೆಂದಿದ್ದೆ ಎಂದು ವಿವರಿಸಲು ಪ್ರಯತ್ನಿಸಿದ್ದಾಗಿ ವರದಿಯಾಗಿದೆ, ಆದರೆ ಸುಳ್ಳು ಹೇಳಿದ್ದಾನೆಂದು ಆರೋಪಿಸಲಾಗಿದೆ

ದೀಕ್ಷಿತ್ ಅವರ ಒಪ್ಪಿಗೆಯಿಲ್ಲದೆ ಪ್ಯಾಕೆಟ್ ತೆಗೆದುಕೊಂಡಿದ್ದಕ್ಕಾಗಿ ಕ್ಷಮೆಯಾಚಿಸಿದ ತಕ್ಷಣವೇ ಹಣ ಕೊಡಲು ಮುಂದಾದರು, ಆದರೆ ಅಂಗಡಿ ಮಾಲೀಕ ಅವನು ಸುಳ್ಳು ಹೇಳುತ್ತಿದ್ದಾನೆಂದು ಆರೋಪಿಸಿದ್ದಾನೆ. ಮನೆಗೆ ಹಿಂತಿರುಗಿದಾಗ, ಹುಡುಗ ತನ್ನ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ, ನಂತರ ಅವನು ಬಾಗಿಲು ತೆರೆಯಲೇ ಇಲ್ಲ, ಆತ ಪ್ರಜ್ಞಾಹೀನನಾಗಿ ಬಿದ್ದಿದ್ದ.

ಅರ್ಧ ಖಾಲಿಯಾದ ಕೀಟನಾಶಕ ಬಾಟಲಿಯು ಅವನ ಪಕ್ಕದಲ್ಲಿ ಬಿದ್ದಿದ್ದು, ಬಾಯಿಯಿಂದ ನೊರೆ ಬರುತ್ತಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಅಷ್ಟರೊಳಗಾಗಿ ಪ್ರಾಣಪಕ್ಷಿ ಹಾರಿಹೋಗಿತ್ತು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow