1494 ಕೋಟಿ ರೂ ಹಣ ದುರುಪಯೋಗ ಆರೋಪ: ರಾಜ್ಯಪಾಲರಿಗೆ ಮತ್ತೊಂದು ದೂರು

1494 ಕೋಟಿ ರೂ ಹಣ ದುರುಪಯೋಗ ಆರೋಪ: ರಾಜ್ಯಪಾಲರಿಗೆ ಮತ್ತೊಂದು ದೂರು
ಮೈಸೂರ್ ಸೈಟ್, ಬೆಂಗಳೂರಲ್ಲಿ ಪ್ರಾಸಿಕ್ಯೂಷನ್ ಫೈಟ್, ಇದೇ ಜಟಾಪಟಿ ಈಗ ರಾಷ್ಟ್ರ ರಾಜಧಾನಿ ದೆಹಲಿಗೆ ಶಿಫ್ಟ್ ಆಗಿದೆ. ಮುಡಾ ದಾಖಲೆಯೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರ ಭೇಟಿಗೆ ತೆರಳಿದ್ದಾರೆ. ಇತ್ತ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ತನಿಖೆಗೆ ಆದೇಶಿಸಿ ರಾಜ್ಯಪಾಲರು ಹೊರಡಿಸಿರೋ ಪ್ರಾಸಿಕ್ಯೂಷನ್ ಸರ್ಕಾರ ಮತ್ತು ಗವರ್ನರ್ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂಗೆ, ಕೊಂಚ ರಿಲೀಫ್ ಸಿಕ್ಕಿದೆ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯತ್ನಲ್ಲಿ ಬಾಕಿ ಉಳಿದಿರುವ 1494 ಕೋಟಿ ರೂ. ಹಣ ದುರುಪಯೋಗದ ಬಗ್ಗೆ ವಿಧಾನಪರಿಷತ್ ಬಿಜೆಪಿ ಸದಸ್ಯ ಅರುಣ್ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
1494 ಕೋಟಿ ರೂ. ಹಣ ಎಲ್ಲಿದೆ, ರಾಜ್ಯ ಸರ್ಕಾರದ ಖಜಾನೆಯಲ್ಲೂ ಇಲ್ಲ. ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಯಾವುದೇ ಮಾಹಿತಿ ನೀಡಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






