2025-26ನೇ ಸಾಲಿನ 'ಕನ್ನಡ ರಾಜ್ಯೋತ್ಸವ ಪ್ರಶಸ್ತಿ' ಪಟ್ಟಿ ಪ್ರಕಟ: ಯಾರ್ಯಾರಿಗೆ ಪ್ರಶಸ್ತಿ ಸಿಕ್ತು ಗೊತ್ತಾ..?
ಬೆಂಗಳೂರು: 2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಅಧಿಕೃತವಾಗಿ ಪ್ರಕಟಗೊಂಡಿದೆ. ಈ ಬಾರಿ ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಮಂದಿ ಸಾಧಕರನ್ನು ವಿವಿಧ ಕ್ಷೇತ್ರಗಳಿಂದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಈ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದರು.
ಸಾಹಿತ್ಯ, ಸಂಗೀತ, ನೃತ್ಯ, ಚಿತ್ರರಂಗ, ಕ್ರೀಡೆ, ಸಮಾಜ ಸೇವೆ, ಶಿಕ್ಷಣ, ವೈದ್ಯಕೀಯ, ಪರಿಸರ ಹಾಗೂ ವಿಜ್ಞಾನ-ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಕೊಡುಗೆ ನೀಡಿದವರ ಸಾಧನೆಯನ್ನು ಪರಿಗಣಿಸಿ ಈ ಬಾರಿ ಪ್ರಶಸ್ತಿ ಪ್ರದಾನ ಮಾಡಲು ಸರ್ಕಾರ ನಿರ್ಧರಿಸಿದೆ. ಇತಿಹಾಸದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಸಮಗಾರ ಹರಳಯ್ಯ ಸಮುದಾಯಕ್ಕೆ ಸೇರಿದ ಇಬ್ಬರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಈ ಬಾರಿ ಯಾವುದೇ ಸಂಘ–ಸಂಸ್ಥೆಗಳಿಗೆ ಪ್ರಶಸ್ತಿ ನೀಡದಿರಲು ಸರ್ಕಾರ ನಿರ್ಧರಿಸಿದೆ.
ಅದರ ಜೊತೆಗೆ, 12 ಮಂದಿ ಮಹಿಳೆಯರು ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರಲ್ಲಿ ಕೆಲವರು ಸ್ವಯಂ ಮನವಿ ಸಲ್ಲಿಸಿದ್ದರೂ, ಅವರು ತಮ್ಮ ಕ್ಷೇತ್ರದಲ್ಲಿ ನೀಡಿದ ಗಣನೀಯ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಪ್ರತಿ ಪ್ರಶಸ್ತಿ ವಿಜೇತರಿಗೆ ₹5 ಲಕ್ಷ ನಗದು ಬಹುಮಾನ, 25 ಗ್ರಾಂ ಚಿನ್ನದ ಪದಕ, ಪ್ರಶಸ್ತಿ ಪತ್ರ, ಮತ್ತು ಶಾಲು–ಸ್ಮರಣಿಕೆ ನೀಡಲಾಗುವುದು. ರಾಜ್ಯೋತ್ಸವ ಪ್ರಶಸ್ತಿಗಳನ್ನು ನವೆಂಬರ್ 1ರಂದು ರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಪ್ರದಾನ ಮಾಡಲಾಗುತ್ತದೆ.
ಜಾನಪದ ಕ್ಷೇತ್ರ
-
ಶ್ರೀ ಬಸಪ್ಪ ಭರಮಪ್ಪ ಚೌಡ್ಕಿ – ಕೊಪ್ಪಳ
-
ಬಿ. ಟಾಕಪ್ಪ ಕಣ್ಣೂರು – ಶಿವಮೊಗ್ಗ
-
ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ – ಬೆಳಗಾವಿ
-
ಹನುಮಂತಪ್ಪ, ಮಾರಪ್ಪ, ಚೀಳಂಗಿ – ಚಿತ್ರದುರ್ಗ
-
ಎಂ. ತೋಪಣ್ಣ – ಕೋಲಾರ
-
ಸೋಮಣ್ಣ ದುಂಡಪ್ಪ ಧನಗೊಂಡ – ವಿಜಯಪುರ
-
ಸಿಂಧು ಗುಜರನ್ದ – ದಕ್ಷಿಣ ಕನ್ನಡ
-
ಎಲ್. ಮಹದೇವಪ್ಪ ಉಡಿಗಾಲ – ಮೈಸೂರು
ಸಾಹಿತ್ಯ ಕ್ಷೇತ್ರ
-
ಪ್ರೊ. ರಾಜೇಂದ್ರ ಚೆನ್ನಿ – ಶಿವಮೊಗ್ಗ
-
ತುಂಬಾಡಿ ರಾಮಯ್ಯ – ತುಮಕೂರು
-
ಪ್ರೊ. ಅರ್. ಸುನಂದಮ್ಮ – ಚಿಕ್ಕಬಳ್ಳಾಪುರ
-
ಡಾ. ಎಚ್.ಎಲ್. ಪುಷ್ಪ – ತುಮಕೂರು
-
ರಹಮತ್ ತರೀಕೆರೆ – ಚಿಕ್ಕಮಗಳೂರು
-
ಹ.ಮ. ಪೂಜಾರ – ವಿಜಯಪುರ
ಚಲನಚಿತ್ರ / ಕಿರುತೆರೆ
-
ಪ್ರಕಾಶ್ ರಾಜ್ – ದಕ್ಷಿಣ ಕನ್ನಡ
-
ವಿಜಯಲಕ್ಷ್ಮೀ ಸಿಂಗ್ – ಕೊಡಗು
ಆಡಳಿತ ಕ್ಷೇತ್ರ
-
ಹೆಚ್. ಸಿದ್ದಯ್ಯ, ಭಾ.ಆ.ಸೇ (ನಿ) – ಬೆಂಗಳೂರು ದಕ್ಷಿಣ (ರಾಮನಗರ)
ವೈದ್ಯಕೀಯ ಕ್ಷೇತ್ರ
-
ಆಲಮ್ಮ ಮಾರಣ್ಣ – ತುಮಕೂರು
-
ಡಾ. ಜಯರಂಗನಾಥ್ – ಬೆಂಗಳೂರು ಗ್ರಾಮಾಂತರ
ಸಮಾಜ ಸೇವೆ
-
ಮತಿ. ಸೂಲಗಿತ್ತಿ ಈರಮ್ಮ – ವಿಜಯನಗರ
-
ಫಕ್ಕೀರಿ – ಬೆಂಗಳೂರು ಗ್ರಾಮಾಂತರ
-
ಕೋರಿನ್ ಆಂಟೊನಿಯಟ್ ರಸ್ಕೀನಾ – ದಕ್ಷಿಣ ಕನ್ನಡ
-
ಡಾ. ಎನ್. ಸೀತಾರಾಮ ಶೆಟ್ಟಿ – ಉಡುಪಿ
-
ಕೋಣಂದೂರು ಲಿಂಗಪ್ಪ – ಶಿವಮೊಗ್ಗ
-
ಉಮೇಶ ಪಂಬದ – ದಕ್ಷಿಣ ಕನ್ನಡ
-
ಡಾ. ರವೀಂದ್ರ ಕೋರಿಶೆಟ್ಟಿರ್ – ಧಾರವಾಡ
-
ಕೆ. ದಿನೇಶ್ – ಬೆಂಗಳೂರು
-
ಶಾಂತರಾಜು – ತುಮಕೂರು
-
ಜಾಫರ್ ಮೊಹಿಯುದ್ದೀನ್ – ರಾಯಚೂರು
-
ಪೆನ್ನ ಓಬಳಯ್ಯ – ಬೆಂಗಳೂರು ಗ್ರಾಮಾಂತರ
-
ಬಾಯಿ – ಬಳ್ಳಾರಿ
-
ಪುಂಡಲೀಕ ಶಾಸ್ತ್ರೀ (ಬುಡಬುಡಕೆ) – ಬೆಳಗಾವಿ
ಹೊರನಾಡು / ಹೊರದೇಶ
-
ಜಕರಿಯ ಬಜಪೆ – ಸೌದಿ ಅರೇಬಿಯಾ
-
ಪಿ.ವಿ. ಶೆಟ್ಟಿ – ಮುಂಬೈ
ಪರಿಸರ ಕ್ಷೇತ್ರ
-
ರಾಮೇಗೌಡ – ಚಾಮರಾಜನಗರ
-
ಮಲ್ಲಿಕಾರ್ಜುನ ನಿಂಗಪ್ಪ – ಯಾದಗಿರಿ
ಕೃಷಿ ಕ್ಷೇತ್ರ
-
ಡಾ. ಎಸ್.ವಿ. ಹಿತ್ತಲಮನಿ – ಹಾವೇರಿ
-
ಎಂ.ಸಿ. ರಂಗಸ್ವಾಮಿ – ಹಾಸನ
ನಿಮ್ಮ ಪ್ರತಿಕ್ರಿಯೆ ಏನು?