300 ಅಡಿ ಕಂದಕಕ್ಕೆ ಉರುಳಿದ ಸೇನಾ ವಾಹನ: ಕರ್ನಾಟಕದ ಮೂವರು ಸೈನಿಕರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ 18 ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ನಿಯಂತ್ರಣ ತಪ್ಪಿ 300 ಅಡಿ ಆಳದ ಕಂದರಕ್ಕೆ ಬಿದ್ದಿದ್ದು, ಐವರು ಯೋಧರು ಹುತಾತ್ಮರಾಗಿ ಹಲವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಹಲವು ಯೋಧರು ಗಾಯಗೊಂಡಿದ್ದು, ಮಾಹಿತಿ ಪಡೆದ ತಕ್ಷಣ ಸೇನಾಧಿಕಾರಿಗಳು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಈ ವೇಳೆ ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಿದ್ದು, ವರದಿ ಪ್ರಕಾರ, ಸೇನಾ ವಾಹನಲ್ಲಿ 18 ಯೋಧರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇದರಲ್ಲಿ 5 ಮಂದಿ ಹುತಾತ್ಮರಾಗಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿದ್ದಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಕರ್ನಾಟಕ ಮೂಲದ ಮೂರು ಜನ ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಮಾಹಿತಿ ದೊರೆತಿದೆ.ಮೆಂಧಾರ್ನ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಈ ಘಟನೆ ನಡೆದಿತ್ತು. ಈ ಅಪಘಾತದಲ್ಲಿ ಮರಾಠ ರೆಜಿಮೆಂಟ್ನ ಐವರು ಸೈನಿಕರು ಸಾವನ್ನಪ್ಪಿದ್ದರು.
ಇವರಲ್ಲಿ ಮೂರು ಜನ ಕರ್ನಾಟಕ ಮೂಲದ ಸೈನಿಕರಿದ್ದು, ಬೆಳಗಾವಿಯ ಪಂತ ಬಾಳೆಕುಂದ್ರಿಯ ದಯಾನಂದ ತಿರಕನ್ನವರ್, ಉಡುಪಿಯ ಕುಂದಾಪುರದ, ಜಿಜಾಡಿಯ ಯೋದ ಅನೂಪ್ ಹಗೂ ಬಾಗಲಕೋಟೆ ಮೂಲದ ಒಬ್ಬ ಯೋದರು ಸಾವನ್ನಪ್ಪಿದ್ದಾರೆ. ಇವರ ಜೊತೆಗೆ ಮಹರಾಷ್ಟ್ರದ ನಾಗ್ಪೂರ್ ಮತ್ತು ಸಾತಾ ಜಿಲ್ಲೆಯ ಯೋಧರು ಹುತಾತ್ಮರಾಗಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






