40 ಪುಟಗಳ ಡೆತ್ ನೋಟ್ ಬರೆದಿಟ್ಟು ನೇ*ಣಿಗೆ ಶರಣಾದ ವ್ಯಕ್ತಿ.! ಯಾಕೆ ಗೊತ್ತಾ..?

ಡಿಸೆಂಬರ್ 9, 2024 - 16:03
 0  11
40 ಪುಟಗಳ ಡೆತ್ ನೋಟ್ ಬರೆದಿಟ್ಟು ನೇ*ಣಿಗೆ ಶರಣಾದ ವ್ಯಕ್ತಿ.! ಯಾಕೆ ಗೊತ್ತಾ..?

ಬೆಂಗಳೂರು: ಖಿನ್ನತೆಗೆ ಒಳಗಾಗಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಮಾರತಹಳ್ಳಿಯ ಮಂಜುನಾಥ್ ಲೇಔಟ್ ನಲ್ಲಿ ನಡೆದಿದೆ. ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಉತ್ತರ ಪ್ರದೇಶ ಮೂಲದ ಅತುಲ್ ಸುಭಾಶ್ ಮಾರತಹಳ್ಳಿಯ ಲೇಔಟ್‌ನಲ್ಲಿ ವಾಸವಿದ್ದರು. ಈತನಿಗೆ ಮದುವೆಯಾಗಿದ್ದು,

 ಅತುಲ್ ಮೇಲೆ ಪತ್ನಿ ಉತ್ತರ ಪ್ರದೇಶದಲ್ಲಿ ಕೇಸ್ ಹಾಕಿದ್ದಳು. ಇದಕ್ಕೆ ಮನನೊಂದ ಗಂಡ 40 ಪುಟಗಳ ಡೆತ್ ನೋಟ್ ಬರೆದಿಟ್ಟು, #justice is due# ಎಂಬ ಫಲಕವನ್ನು ತನ್ನ ಕುತ್ತಿಗೆಗೆ ಹಾಕಿಕೊಂಡು ನಂತರ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಾಯುವುದಕ್ಕೂ ಮುನ್ನ NGOದ ವಾಟ್ಸಾಪ್ ಗ್ರೂಪ್‌ಗೆ ಮಧ್ಯರಾತ್ರಿ ಡೆತ್ ನೋಟ್ ಕಳುಹಿಸಿದ್ದನು. ಸಾಧ್ಯವಾದರೆ ನನ್ನ ಕುಟುಂಬಕ್ಕೆ ಸಹಾಯ ಮಾಡಿ ಎಂದು ವಾಟ್ಸಾಪ್ ಗುಂಪಿನಲ್ಲಿ ಮೆಸೇಜ್ ಮಾಡಿದ್ದಾನೆ. ನಂತರ ಕಬೋರ್ಡ್ ಮೇಲೆ ಒಂದಷ್ಟು ಮಾಹಿತಿಗಳನ್ನು ಅಂಟಿಸಿ ನೇಣಿಗೆ ಶರಣಾಗಿದ್ದು, ಇನ್ನು ಡೆತ್ ನೋಟ್ ಎಲ್ಲಿದೆ, ಕೀ ಎಲ್ಲಿದೆ, ಏನೇನು ಕೆಲಸ ಆಗಿದೆ, ಏನೇನ್ ಕೆಲಸ ಬಾಕಿ ಇದೆ ಎಲ್ಲವೂ ಉಲ್ಲೇಖ ಮಾಡಿದ್ದಾನೆ. ಈ ಘಟನಾ ಸ್ಥಳಕ್ಕೆ ಮಾರತ್ತಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow