500 ರೂ ಲಂಚ ಪಡೆದ ಆರೋಪ: 10 ವರ್ಷಗಳ ಬಳಿಕ ಜೈಲು ಪಾಲಾದ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ!

ಜೂನ್ 20, 2025 - 21:00
 0  16
500 ರೂ ಲಂಚ ಪಡೆದ ಆರೋಪ: 10 ವರ್ಷಗಳ ಬಳಿಕ ಜೈಲು ಪಾಲಾದ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ!

ಬೆಳಗಾವಿ:- 500 ರೂ ಲಂಚ ಪಡೆದ ಆರೋಪದ ಹಿನ್ನೆಲೆ 10 ವರ್ಷಗಳ ಬಳಿಕ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜೈಲು ಪಾಲಾಗಿದ್ದಾರೆ. ಜೈಲು ಪಾಲದ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಯನ್ನು ನಾಗೇಶ್ ಶಿವಂಗೇಕರ್ ಎಂದು ಗುರುತಿಸಲಾಗಿದೆ. 

ಪ್ರಕರಣದಲ್ಲಿ ಇನ್ನೊಂದು ವಿಚಿತ್ರವೆಂದರೆ ದೂರುದಾರ ಕೂಡ ಮೃತಪಟ್ಟು ಐದು ವರ್ಷವಾಗಿದೆ. ನಾಗೇಶ್ ಶಿವಂಗೇಕರ್​ 30 ವರ್ಷ ಹಿಂದೆ ಪಹಣಿ ಪತ್ರದಲ್ಲಿ ವಾಟ್ನಿ ಮಾಡಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಲಕ್ಷ್ಮಣ ಕಟಾಂಬಳೆ ಎಂಬುವರಿಂದ ಲೋಕಾಯುಕ್ತಕ್ಕೆ ದೂರು ನೀಡಿದ್ದರು. 500 ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. 

2006ರಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ಒಂದು ವರ್ಷ ಜೈಲು ಮತ್ತು 1 ಸಾವಿರ ರೂ ದಂಡ ವಿಧಿಸಲಾಗಿತ್ತು. ಬಳಿಕ ಧಾರವಾಡ ಹೈಕೋರ್ಟ್ ‌ಮೋರೆ ಹೋಗಿದ್ದ ನಾಗೇಶ್ ಶಿವಂಗೇಕರ್​ಗೆ ರಿಲೀಫ್ ಸಿಕ್ಕಿತ್ತು. ಆದರೆ ಹೈಕೋರ್ಟ್ ‌ಆದೇಶ ಪ್ರಶ್ನಿಸಿ ಲೋಕಾಯುಕ್ತ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು.

ಇಂದು ಸುಪ್ರೀಂ ಕೋರ್ಟ್​ದಿಂದ ಲೋಕಾಯುಕ್ತ ಪರ ತೀರ್ಪು ಪ್ರಕಟವಾಗಿದ್ದು, ಕೆಲಸದಿಂದ ನಿವೃತ್ತಯಾಗಿ 10 ವರ್ಷದ ಬಳಿಕ ಆರೋಪಿ ಮತ್ತೆ ಜೈಲು ಪಾಲಾಗಿದ್ದಾರೆ. ಸದ್ಯ ಬೆಳಗಾವಿ ಹಿಂಡಲಗಾ ಜೈಲಿಗೆ ನಾಗೇಶ್ ಶಿವಂಗೇಕರ್​​ನ್ನು ಲೋಕಾಯುಕ್ತ ಪೊಲೀಸರು ರವಾನಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow