Actor Darshan: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಅಂತ್ಯ: ಅ.14ಕ್ಕೆ “ದಾಸ”ನ ಜಾಮೀನು ಭವಿಷ್ಯ

ಅಕ್ಟೋಬರ್ 10, 2024 - 18:05
 0  16
Actor Darshan: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಅಂತ್ಯ: ಅ.14ಕ್ಕೆ “ದಾಸ”ನ ಜಾಮೀನು ಭವಿಷ್ಯ

 ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹ.ತ್ಯೆ ಪ್ರಕರಣದಲ್ಲಿ ಆರೋಪಿಯಾಗಿರೋ ನಟ ದರ್ಶನ್‌ ಬೇಲ್‌ ಅರ್ಜಿ ವಿಚಾರಣೆ ಇಂದಿಗೆ ಅಂತ್ಯಗೊಂಡಿದ್ದು, ಜಾಮೀನು ಅರ್ಜಿ ಕುರಿತ ಆದೇಶವನ್ನು ಅಕ್ಟೋಬರ್ 14 ರಂದು ನ್ಯಾಯಾಧೀಶರು ಹೊರಡಿಸಲಿದ್ದಾರೆ.

ಸುದೀರ್ಘ ವಿಚಾರಣೆ ನಡೆಸಿದ್ದ ಸೆಷನ್ಸ್‌ ಕೋರ್ಟ್‌ ನ್ಯಾ. ಜೈಶಂಕರ್‌ ಇಂದು ವಿಚಾರಣೆಯನ್ನು ಮುಕ್ತಾಯಗೊಳಿಸಿ ಅ.14 ರಂದು ಜಾಮೀನು ಅದೇಶ ಪ್ರಕಟಿಸುವುದಾಗಿ ತಿಳಿಸಿದರು. ಇಂದು ದರ್ಶನ್‌ ಪರ ಹಿರಿಯ ಕ್ರಿಮಿನಲ್‌ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರೆ ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದರು.

ಬುಧವಾರ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಕೋರ್ಟ್‌ ಅ.14 ರಂದು ಆದೇಶ ಪ್ರಕಟಿಸುವುದಾಗಿ ಹೇಳಿತ್ತು. ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಬಂಧನವಾಗಿ ನಾಲ್ಕು ತಿಂಗಳಾಗುತ್ತಾ ಬಂದಿದೆ. ಜೂನ್ 11 ರಂದು ದರ್ಶನ್, ಪವಿತ್ರಾ ಮತ್ತು ಇತರೆ ಆರೋಪಿಗಳನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. 

 

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow