Actor Darshan: ನಾಳೆ ಕೋರ್ಟ್ʼನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ!

ಅಕ್ಟೋಬರ್ 27, 2024 - 12:08
 0  10
Actor Darshan: ನಾಳೆ ಕೋರ್ಟ್ʼನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ!

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ಇನ್ನೂ ನಟ ದರ್ಶನ್ ಜಾಮೀನು ಭವಿಷ್ಯ ನಾಳೆ ಸೋಮವಾರ ನಿರ್ಧಾರವಾಗಲಿದೆ. ಹೈಕೋರ್ಟ್‌ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನಟ ದರ್ಶನ್‌ರ ಮೆಡಿಕಲ್ ರಿಪೋರ್ಟ್ ಸಲ್ಲಿಕೆ ಮಾಡುವಂತೆ ಬಳ್ಳಾರಿ ಜೈಲಾಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಜೈಲಾಧಿಕಾರಿಗಳು ನಾಳೆ ಹೈಕೋರ್ಟ್‌ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಕೆ‌‌ ಮಾಡಲಿದ್ದಾರೆ.

ವೈದ್ಯಾಧಿಕಾರಿಗಳು ಈಗಾಗಲೇ ನಟ ದರ್ಶನ್‌ಗೆ ಎಂಆರ್‌ಐ ಸ್ಕ್ಯಾನ್ ಮಾಡಿದ್ದಾರೆ. ಸ್ಕ್ಯಾನಿಂಗ್ ವೇಳೆ ಬೆನ್ನುನೋವು ಇರುವುದರ ಬಗ್ಗೆ ಉಲ್ಲೇಖಿಸಿದ್ದಾರೆ. ಮತ್ತೊಂದು ಕಡೆ ಮೆಡಿಕಲ್ ರಿಪೋರ್ಟ್ ಇಟ್ಟುಕೊಂಡೇ ನಟ ದರ್ಶನ್‌ ಪರ ವಕೀಲರು ಜಾಮೀನು ಕೋರಿ ವಾದ ಮಂಡಿಸಲಿದ್ದಾರೆ. ದರ್ಶನ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಲಿದ್ದಾರೆ. ಮತ್ತೊಂದು ಕಡೆ ಜಾಮೀನು ಕೊಡದಂತೆ ಎಸ್ ಪಿ ಪಿ ಪ್ರಸನ್ನ ಕುಮಾರ್ ಆಕ್ಷೇಪಣೆಗೆ ತಯಾರಿ ಮಾಡಿಕೊಂಡಿದ್ದಾರೆ.

ಇನ್ನೂ ನಟ ದರ್ಶನ್ ಅವರನ್ನು ಅಭಿಮಾನಿಗಳು ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಅವರ ಹಳೇ ಸಿನಿಮಾಗಳನ್ನು ಮರು ಬಿಡುಗಡೆ ಮಾಡಲಾಗುತ್ತಿದೆ. ಕೆಲವು ವಾರಗಳ ಹಿಂದೆ ಕರಿಯ ಸಿನಿಮಾವನ್ನು ರೀ-ರಿಲೀಸ್ ಮಾಡಲಾಗಿತ್ತು. ಈಗ ‘ನವಗ್ರಹ’ ಸಿನಿಮಾವನ್ನು ಮರು ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ. ನವೆಂಬರ್​ 8ರಂದು ‘ನವಗ್ರಹ’ ಸಿನಿಮಾ ಮತ್ತೆ ತೆರೆಗೆ ಬರುತ್ತಿದೆ.

ವೆಬ್ ಡೆಸ್ಕ್
ಫೋಕಸ್ ಕರ್ನಾಟಕ

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow