Actor Darshan: “ದಾಸ”ನಿಗೆ ಸಿಕ್ತು ತಾತ್ಕಾಲಿಕ ರಿಲೀಫ್: ನಟ ದರ್ಶನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಆರೋಪಿಯಾಗಿದ್ದಾರೆ. ಮಧ್ಯಂತರ ಜಾಮೀನು ಪಡೆದು ಜೈಲಿಂದ ಹೊರಗೆ ಬಂದಿರುವ ನಟ ದರ್ಶನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ರೆಗ್ಯುಲರ್ ಜಾಮೀನು ಸಿಗುವವರೆಗೆ ಮಧ್ಯಂತರ ಜಾಮೀನು ಮುಂದುವರಿದೆ ಎಂದು ಹೈಕೋರ್ಟ್ ಆದೇಶ ನೀಡಿದೆ.
ಹೌದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾಗೌಡ ಮತ್ತಿತರ ಆರೋಪಿಗಳ ರೆಗ್ಯುಲರ್ ಜಾಮೀನು ಅರ್ಜಿ ವಿಚಾರಣೆ ಇಂದಿಗೆ ಪೂರ್ಣಗೊಂಡಿತು. ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಮೂರ್ತಿಗಳು, ರೆಗ್ಯುಲರ್ ಜಾಮೀನು ಅರ್ಜಿ ಕುರಿತ ಆದೇಶ ಪ್ರಕಟವಾಗುವವರೆಗೆ ಮಧ್ಯಂತರ ಜಾಮೀನು ಆದೇಶಮುಂದುವರೆಯಲಿದೆ ಎಂದು ಆದೇಶ ನೀಡಿದೆ.
ದರ್ಶನ್ ಪರ ವಕೀಲ ಸಿ.ವಿ. ನಾಗೇಶ್ ಅವರು ದರ್ಶನ್ ಗೆ ನಾಡಿದ್ದು ಬೆನ್ನುನೋವಿಗೆ ಸರ್ಜರಿ ನಡೆಯಲಿದೆ. ಸರ್ಜರಿಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ದರ್ಶನ್ ಗೆ ಸ್ಟಿರಾಯ್ಡ್ ಇಂಜೆಕ್ಷನ್ ನೀಡಲಾಗುತ್ತಿದೆ. ಈಗ ಫಿಸಿಯೋಥೆರಪಿ, ವ್ಯಾಯಾಮ ಮಾಡಿಸಲಾಗುತ್ತಿದೆ. ಡಿ.11ರಂದು ಸರ್ಜರಿ ಮಾಡುವುದಾಗಿ ಕೋರ್ಟ್ ಗೆ ಮಾಹಿತಿ ನೀಡುವುದಾಗಿ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಮಾಹಿತಿ ನೀಡಿದರು. ಅವರ ಜಾಮೀನು ಅವಧಿ ಡಿಸೆಂಬರ್ 11ಕ್ಕೆ ಅಂತ್ಯವಾಗುವ ಹಿನ್ನೆಲೆಯಲ್ಲಿ ವಿಸ್ತರಣೆಗಾಗಿ ಮನವಿ ಮಾಡಲಾಗಿತ್ತು. ಈಗ ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ.
ನಿಮ್ಮ ಪ್ರತಿಕ್ರಿಯೆ ಏನು?






